ವಿದ್ಯಾಥರ್ಿಗಳಿಗೆ ಕರಿಯರ್ ಗೈಡೆನ್ಸ್ ಶಿಬಿರ ಕಾರ್ಯಕ್ರಮ
ಲೋಕದರ್ಶನ ವರದಿ
ಹಾವೇರಿ06 : ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಮಂಗಳೂರಿನ ಕರಾವಳಿ ಕಾಲೇಜುಗಳ ಸಮೂಹದ ಸಹಯೋಗದೊಂದಿಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಕನರ್ಾಟಕ ಕರಿಯರ್ ಯಾತ್ರೆ ಹಾವೇರಿ ಜಿಲ್ಲೆ ತಲಪಿದ್ದು, ಯಾತ್ರೆಯ ಭಾಗವಾಗಿ ಸರಕಾರಿ ಸ್ವತಂತ್ರ ಪ.ಪೂ.ಬಾಲಕಿಯರ ಹಾಗೂ ಸ್ವತಂತ್ರ ಪ.ಪೂ. ಬಾಲಕರ ಕಾಲೇಜು ಕಾಲೇಜು ಮತ್ತು ಗುದ್ಲೆಪ್ಪ ಹಳ್ಳಿಕೇರಿ ಪ.ಪೂ. ಕಾಲೇಜಿನ ವಿದ್ಯಾಥರ್ಿಗಳಿಗೆ ಕರಿಯರ್ ಗೈಡೆನ್ಸ್ ಶಿಬಿರವನ್ನು ಎಸ್ಎಫ್ಐ ಜಿಲ್ಲಾ ಸಮಿತಿ ಶಿಬಿರ ಸಂಘಟಿಸಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ, ಮಂಗಳೂರಿನ ಕರಿಯರ್ ಗೈಡೆನ್ಸ್ ಆಂಡ್ ಇನ್ಫೊರ್ಮೇಶನ್ ಸೆಂಟರ್ನ ಸ್ಥಾಪಕಾಧ್ಯಕ್ಷ ಮತ್ತು ಕಳೆದ ಹದಿನಾರು ವರ್ಷಗಳಿಂದ ಕರಿಯರ್ ಗೈಡ್/ಕರಿಯರ್ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿರುವ ಉಮರ್ ಯು.ಹೆಚ್. ಮಾತನಾಡಿ ವಿದ್ಯಾಥರ್ಿಗಳಿಗೆ ಕಲಿಕಾ ಕೌಶಲ, ಕರಿಯರ್ ಗೈಡೆನ್ಸ್ನ ಮಹತ್ವ, ಕರಿಯರ್ ಪ್ಲಾನಿಂಗ್ನ ವಿಧಾನ, ಪಿಯುಸಿ ಬಳಿಕ ಕಲಿಕೆಗಿರುವ ಅವಕಾಶಗಳು/ಕೋಸರ್್ಗಳು ಹಾಗೂ ಸಿಇಟಿ ಮತ್ತು ನೀಟ್ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾಥರ್ಿಗಳಿಗೆ ನಡೆಯಲಿರುವ ಆನ್ಲೈನ್ ಕೌನ್ಸಿಲಿಂಗ್ನ ವಿಧಾನ/ಹಂತಗಳ ಕುರಿತಂತೆ ಶಿಬಿರದಲ್ಲಿ ಮಾರ್ಗದರ್ಶನ ನೀಡಿದರು.
ಎಸ್ಎಫ್ಐ ಜಿಲ್ಲಾ ಸಮಿತಿಯ ಸಹ ಕಾರ್ಯದಶರ್ಿ ಬಸವರಾಜ್ ಬೋವಿ ಹಾಗೂ ಮುಖಂಡರಾದ ಮೋಹನ್ ಆರ್.ಬಿ. ಮಲ್ಲಿಕಾಜರ್ುನ. ಮತ್ತಿತರರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 