ಪತ್ರಕರ್ತರ ಹಾಗೂ ವೈದ್ಯರ ದಿನಾಚರಣೆ ಆಚರಣೆ
Celebration of Journalists' Day and Doctors' Day
ಆಲಮೇಲ 2: ಪಟ್ಟಣದ ಓಂ ಶಾಂತಿ ಕೇಂದ್ರದಲ್ಲಿ ಗುರುವಾರ ಪತ್ರಕರ್ತರ ದಿನಾಚರಣೆ ಹಾಗೂ ವೈದ್ಯರ ದಿನಾಚರಣೆಯನ್ನು ಸಂಯುಕ್ತವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಮಂಜುಷಾ ಪಾಟೀಲ ಹಾಗೂ ಡಾ. ಮಾಜನ್ ಮಾತನಾಡಿ, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ವಿವರಿಸಿದರು. ನಿಯಮಿತ ವ್ಯಾಯಾಮ, ಯೋಗಾಭ್ಯಾಸ, ಸಮತೋಲನ ಆಹಾರ ಮತ್ತು ಆರೋಗ್ಯ ತಪಾಸಣೆಗೆ ಮಹತ್ವ ನೀಡಿದ ಅವರು, ಉತ್ತಮ ಆರೋಗ್ಯವೇ ಉತ್ತಮ ಜೀವನದ ಮೂಲ ಎಂದು ತಿಳಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಲವು ವೈದ್ಯರ ಕೊಡುಗೆಯನ್ನು ಸ್ಮರಿಸಿ, ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ರಾಜಯೋಗಿನಿಯರಾದ ಬ್ರಹ್ಮಕುಮಾರಿ ರೇಣುಕಾ ಅಕ್ಕ ಹಾಗೂ ಬ್ರಹ್ಮಕುಮಾರಿ ಭಾಗ್ಯ ಅಕ್ಕ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಪತ್ರಕರ್ತರು ಮತ್ತು ವೈದ್ಯರು ಸಮಾಜದ ಎರಡು ಪ್ರಮುಖ ಸ್ತಂಭಗಳಾಗಿದ್ದು, ಒಬ್ಬರು ಜನರ ಆರೋಗ್ಯ ಕಾಪಾಡಿದರೆ ಮತ್ತೊಬ್ಬರು ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತಂದು ಜಾಗೃತಿ ಮೂಡಿಸುತ್ತಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪತ್ರಕರ್ತರು, ವೈದ್ಯರು ಹಾಗೂ ಬ್ರಹ್ಮಕುಮಾರಿ ಸಂಸ್ಥೆಯ ಸಹೋದರರು-ಸಹೋದರಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 