ಅಥಣಿ ರಸ್ತೆ ಕಾಮಗಾರಿಗೆ ಚಿದಾನಂದ ಸವದಿ ಭೂಮಿ ಪೂಜೆ
Chidananda Savadi Bhoomi Puja for Athani Road work
ಅಥಣಿ 25: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಅಥಣಿ ಪುರಸಭೆಯ ಮೂಲಕ ಅಥಣಿ ಪಟ್ಟಣದಲ್ಲಿ ಜನಪರ ಮತ್ತು ಅಭಿವೃದ್ಧಿ ಪರ ಕಾರ್ಯಗಳು ಅನುಷ್ಠಾನಗೊಳ್ಳುತ್ತಿವೆ ಎಂದು ಕಾಂಗ್ರೆಸ್ ಯುವ ನಾಯಕ ಚಿದಾನಂದ ಸವದಿ ಹೇಳಿದರು. ಅವರು ಪುರಸಭಾ ಯೋಜನೆಯಡಿ ಮಂಜೂರಾದ ಬಸವೇಶ್ವರ ವೃತ್ತದಿಂದ ಹನುಮಾನ ಅಗಸಿ ವರೆಗಿನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಇತ್ತೀಚೆಗಷ್ಟೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಅಥಣಿ ಪುರಸಭೆಯನ್ನು ನಗರ ಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಅಥಣಿಗೆ ಹರಿದು ಬರಲಿದೆ ಎಂದು ಹೇಳಿದ ಅವರು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಕೆರೆ ಅಭಿವೃದ್ಧಿ ಮತ್ತು ಭಾಗೀರಥಿ ನಾಲಾ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ ಎಂದರು.
ಪುರಸಭಾ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಗುತ್ತಿಗೆದಾರ ಮಯೂರ ಸಿಂಗೆ, ಸದಸ್ಯರಾದ ಮಲ್ಲೇಶ ಹುದ್ದಾರ, ಸಂತೋಷ ಸಾವಡಕರ, ಮಲ್ಲಿಕಾರ್ಜುನ ಬುಟಾಳಿ, ವೀಲೀನರಾಜ ಯಳಮೇಲಿ, ರಾಜಶೇಖರ ಗುಡೋಡಗಿ, ರವಿ ಭಡಕಂಬಿ, ರಮೇಶ ಪವಾರ, ನರಸು ಬಡಕಂಬಿ, ಶಶಿಕಾಂತ ಹುಲಕುಂದ, ಬಸವರಾಜ ನಾಯಿಕ, ಸೈಯ್ಯದಮೀನ್ ಗದ್ಯಾಳ, ರಾಜು ಬುಲುಬುಲೆ, ಬಾಬು ಖೆಮಲಾಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 