ಚಿಕ್ಕೋಡಿ ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷ ಮಗೆಣ್ಣವರಗೆ ಸನ್ಮಾನ
ಮಾಂಜರಿ 15: ಮುಂಬರುವ ದಿನಮಾನಗಳಲ್ಲಿ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಮತಕ್ಷೇತ್ರದ ಜೊತೆಗೆ ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ಜಾತ್ಯಾತೀತ ಜನತಾ ದಳ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ ಪಕ್ಷವನ್ನು ಬಲಿಷ್ಟಗೊಳಿಸಲಾಗುವುದೆಂದು ನೂತನ ಚಿಕ್ಕೋಡಿ ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷ ಮಾಜಿ ಶಾಸಕ ಕಲ್ಲಪ್ಪಾ ಮಗೆಣ್ಣವರ ಹೇಳಿದರು.
ಅವರು ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಇಂದು ಲಕ್ಷ್ಮೀ ಸೌಹಾರ್ದ ಸಂಸ್ಥೆಯ ಸಭಾಗೃಹದಲ್ಲಿ ಚಿಕ್ಕೋಡಿ ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷರಾಗಿ ಆಯ್ಕೆಯಾದ ಕಾರಣ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಶಿರಗುಪ್ಪಿ ಗ್ರಾಮದ ಹಿರಿಯ ಮುಖಂಡ ಎಮ್.ಕೆ.ಪಾಟೀಲ ವಹಿಸಿದ್ದರು. ನೂತನವಾಗಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ಕಲ್ಲಪ್ಪಾ ಮಗೆಣ್ಣವರ ಇವರನ್ನು ಚಿಕ್ಕೊಡಿ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರದ ಪಕ್ಷ ಹಲವಾರು ಮುಖಂಡರು ಸನ್ಮಾನಿಸಿದರು.
ರಾಜೇಂದ್ರ ಐಹೋಳೆ, ಗಿರಿಶ ಬುಟಾಳೆ, ರಮೇಶ ಮಾಳಿ, ಬಿ.ಆರ್.ಪಾಟೀಲ, ಪ್ರಮೋದ ಪಾಟೀಲ, ಈರಣ್ಣ ಕುಮಟೋಳಿ, ಪ್ರಕಾಶ ಐಹೊಳೆ ಹಾಗೂ ಹಲವಾರು ಮುಖಂಡರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಸುನಿತಾ ಹೊನಕಾಂಬಳೆ, ಮುಸ್ತಾಕ ಅವಟಿ, ಕಾಡಗೌಡಾ ಪಾಟೀಲ, ಬಸಗೌಡಾ ಪಾಟೀಲ, ಅಣ್ಣಾ ಪಾಟೀಲ, ಜಿನ್ನಪ್ಪಾ ಶೇಡಬಾಳೆ, ಪ್ರಕಾಶ ಹುಲ್ಲೋಳಿ, ರಾಜೇಂದ್ರ ಐಹೊಳೆ, ಬಸವರಾಜ ಪಾಟೀಲ, ಶ್ರೀಶೈಲ ಹಳಸನವರ, ರಾಜೇಶ ಐಹೊಳೆ ಹಾಗೂ ಇನ್ನಿತರರು ಹಾಜರಿದ್ದರು.
ಸುನಿತಾ ಹೊನಕಾಂಬಳೆ ಸ್ವಾಗತಿಸಿ, ಬಿ.ಆರ್.ಕೋಳಿ ನಿರೂಪಿಸಿ, ಚಂದ್ರಕಾಂತ ಪಾಟೀಲ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 