ಪ್ರತಿಭಾ ಕಾರಂಜಿಯಲ್ಲಿ ತುಂಗಳ ಶಾಲೆಯ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ,
Children from Tungala School selected for state level in Pratibha Karanji,
ಜಮಖಂಡಿ 17 : ತಾಲೂಕಿನ ಹುಲ್ಯಾಳದ ತುಂಗಳ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಖುಷಿ ರಾಮತೀರ್ಥ ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಪ್ರಥಮ ಸ್ಥಾನ ಹಾಗೂ ವಿಕಾಸ ಹಂಚಿನಾಳ ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಕೆ. ಆರ್. ಲಕ್ಕಂ ವಿದ್ಯಾಸಂಸ್ಥೆ, ಮುಧೋಳ ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರಗಳು ಪಡೆದಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ,ಮುಖ್ಯ ಗುರುಗಳು, ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 