ಅಧ್ಯಕ್ಷೆಯಾಗಿ ಆಯ್ಕೆ: ಸಂಭ್ರಮಾಚರಣೆ
ಲೋಕದರ್ಶನ ವರದಿ
ಕಾಗವಾಡ 12: ಶೇಡಬಾಳ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯದ ಉಚ್ಛ ನ್ಯಾಯಾಲಯದ ಆದೇಶದಂತೆ ಮಹಾದೇವಿ ಶ್ರೀಕಾಂತ ಮಾಕನ್ನವರ ಇವರನ್ನು ಅಥಣಿ ತಹಸೀಲ್ದಾರ ಎಂ.ಎನ್.ಬಳಿಗಾರ ಆಯ್ಕೆಮಾಡಿ ಅಧಿಕಾರ ನೀಡಿದರು.
ದಿ.10ರಂದು 18 ಸದಸ್ಯರನ್ನು ಹೊಂದಿರುವ ಶೇಡಬಾಳ ಪಟ್ಟಣ ಪಂಚಾಯತಿಯಲ್ಲಿ ಆಧ್ಯಕ್ಷರ ಆಯ್ಕೆ ಪ್ರಕ್ರಿಯೆ ನೆರವೇರಿತು. ಮಹಾದೇವಿ ಮಾಕನ್ನವರ ಇವರು ಪರಿಶಿಷ್ಟ ಪಂಗಡ ವಿಭಾಗದಿಂದ ಚುನಾಯಿತರಾಗಿದ್ದರು. ಸರಕಾರದ ಆದೇಶದಂತೆ ಆಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ ಮೀಸಲಾಗಿತ್ತು. ಅದರಂತೆ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಮಹಾದೇವಿ ಮಾಕನ್ನವರ ಇವರ ಮೇಲೆ ಅವಿಶ್ವಾಸ ಗೊತ್ತವಳಿ ಮಾಡಿ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ತಮ್ಮ ಮೇಲೆ ಅನ್ಯಾಯವಾಗಿದೆ ಎಂದು ನ್ಯಾಯಾಲಯ ಮೋರೆ ಹೋಗಿದ್ದರು. ಈಗ ಅವರನ್ನು ಮತ್ತೇ ಆಧ್ಯಕ್ಷರಾಗಿ ಅಧಿಕಾರ ನೀಡುವ ಆದೇಶ ನ್ಯಾಯಾಲಯ ನೀಡಿದ್ದರಿಂದ ತಹಸೀಲ್ದಾರರು ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 