ಬೇಸಿಗೆಯ ಧಗೆ ಹೆಚ್ಚಾಗಿದ್ದರಿಂದ ಮಣ್ಣಿನ ಮಡಿಕೆಗಳು ಮಾರಾಟಕ್ಕಿಟ್ಟಿರುವುದು
Clay pots are on sale due to the increased summer heat
ಲೋಕದರ್ಶನ ವರದಿ
ಮಾಂಜರಿ 29: ಆಧುನಿಕತೆ ಭರಾಟೆಯಲ್ಲಿ ಹಿಂದಿನ ಕಾಲದ ಅನೇಕ ವಸ್ತುಗಳು ಮೂಲೆ ಗುಂಪಾಗುತ್ತಿರುವ ಇಂದಿನ ದಿನಗಳಲ್ಲಿ ಮಣ್ಣಿನ ಮಡಿಕೆ ಬದಲಾಯಿಸಿಕೊಂಡು ಮಾರುಕಟ್ಟೆಯ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಬೇಡಿಕೆಯಲ್ಲಿದೆ.
ಪ್ರಸಕ್ತ ವರ್ಷದಲ್ಲಿ ಇನ್ನೂ ಮಳೆಯಾಗದೆ, ಬಿಸಿಲ ಧಗೆ, ಸೆಖೆ ಹೆಚ್ಚುತ್ತಿದ್ದು ಬಹುತೇಕರು ಬಡವರ ಪ್ರಿಡ್ಜ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಣ್ಣಿನ ಮಡಿಕೆಗೆ ಮೊರೆ ಹೋಗುತ್ತಿದ್ದು, ಬೀದಿ ಬದಿಗಳಲ್ಲಿ ಯಥೇಚ್ಚವಾಗಿ ಮಾರಾಟವಾಗುತ್ತಿದೆ. ಆಧುನಿಕತೆಗೆ ತಕ್ಕಂತೆ ಕುಂಬಾರ ಸಹ ತನ್ನ ಮಣ್ಣಿನ ವಸ್ತುಗಳ ರೂಪ ಬದಲಾಯಿಸಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅಣಿಗೊಳಿಸಿದ್ದು, ಬೇಸಿಗೆ ದಾಹ ತೀರಿಸುವಲ್ಲಿ ಮುಖ್ಯ ಪಾತ್ರ ವಹಿಸಿವೆ. ಜನರು ಮಡಿಕೆ ನೀರು ಆರೋಗ್ಯಕ್ಕೆ ಪೂರಕ ಎಂದು ಅರಿತು ಮಣ್ಣಿನ ಮಡಿಕೆ ಉಪಯೋಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಣ್ಣಿನ ಮಡಿಕೆಗಳು ಇತ್ತೀಚೆಗೆ ಬೇಡಿಕೆ ಕಳೆದುಕೊಂಡರೂಬೇಸಿಗೆಯಲ್ಲಿ ಮಾತ್ರ ಮಡಿಕೆಗಳು ಮಾರುಕಟ್ಟೆಯಲ್ಲಿ ಅಸ್ತಿತ್ವವನ್ನ ಉಳಿಸಿಕೊಂಡಿವೆ. ಅಲ್ಲದೆ, ಅಡುಗೆ ಪರಿಕರಗಳಿಗೂ ಮತ್ತೆ ಮಣ್ಣಿನ ಮಡಿಕೆಗಳನ್ನು ಬಳಸುತ್ತಿರುವುದು ಗಮನಾರ್ಹ. ಆದರೂ ಮಡಿಕೆ ತಯಾರಿಸುವವರ ಬದುಕುಗಳು
ಮಾತ್ರ ಹಸನಾಗಲಿಲ್ಲ ಎಂಬ ಕೊರಗು ಕಾಡುತ್ತಿದೆ. ಗ್ರಾಮೀಣ ಭಾಗದ ಬಹುತೇಕ ಮನೆಗಳಲ್ಲಿ ಮನೆ ಹಿರಿಯರು ಆಗಲೂ, ಈಗಲೂ ಪ್ರಿಡ್ಜ್ ನೀರುಬಳಸುವುದು ಕಡಿಮೆ. ಪ್ರತಿ ಬೇಸಿಗೆಯಲ್ಲೂ ಹೊಸ ಮಡಿಕೆ ತಂದು ನೀರಿಟ್ಟುಕೊಂಡು ಕುಡಿಯುವುದನ್ನು ಬಿಟ್ಟಿಲ್ಲ. ಕೇವಲ 2ರಿಂದ 3 ತಿಂಗಳ ಕಾಲ ಮಣ್ಣಿನ ಮಡಿಕೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡೋ ಎಂಬಂತಾಗಿದೆ. ದಿನೇದಿನೇ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಇದೀಗ ಬಡವರ ಪ್ರಿಡ್ಜ್ ಮಣ್ಣಿನ ಮಡಿಕೆ ಸಹಕಾರಿಯಾಗಿದೆ. ವಿದ್ಯುತ್ ಚಿಂತೆಯಿಲ್ಲ. ಆರೋಗ್ಯದ ಸಮಸ್ಯೆಯಿಲ್ಲ, ಆರೋಗ್ಯ ತಜ್ಞರುಮಡಿಕೆ ನೀರನ್ನು ಬೆಂಬಲಿಸುತ್ತಾರೆ. ಮತ್ತೆ ಹಳೆಯ ಪಳೆಯುಳಿಕೆಗಳೇ ಚಿಗುರೊಡೆಯುತ್ತಿವೆ. ಮಣ್ಣಿನ ಮಡಿಕೆಗಳನ್ನು ಹೆಚ್ಚು ಹೆಚ್ಚು ಬಳಸುತ್ತಿರುವುದರಿಮದ ಕಂಬಾರ ವೃತ್ತಿಗೆ ಮರು ಜೀವ ಬಂದಾಂತಾಗಿದೆ.
ಗ್ರಾಮೀಣ ಪ್ರದೇಶ ಮತ್ತು ಹಳ್ಳಿಗಳಿಗೆ ಸಿಮೀತವಾಗಿರದೆ ಮಣ್ಣಿನ ಮಡಿಕೆ ಉಪಯೋಗ ಮಾಡ್ರನ್ ಮಡಿಕೆಗಳಾಗಿ ಮಾಡಿ ನಗರ ಪ್ರದೇಶದಲ್ಲೂ ತಮ್ಮ ಛಾಪು ಮೂಡಿಸಿವೆ. ಕೆಲವರುಕುಂಬಾರ ವೃತ್ತಿಯನ್ನು ಬಿಟ್ಟರೂ ಕೆಲ ಕುಟುಂಬಗಳು ಅದೇ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗುತ್ತಿವೆ. ಗುಡಿ ಕೈಗಾರಿಕೆ ಕುಂಬಾರ ವೃತ್ತಿಗೆ ಸರ್ಕಾರದ ಪ್ರೋತ್ಸಾಹ ಅವಶ್ಯವಾಗಿದೆ. ಕುಂಬಾರ ಸಮುದಾಯ ಉಳಿಯಬೇಕಾದರೆ ವೃತ್ತಿ ಅವಲಂಬಿತರಿಗೆ ಸರ್ಕಾರ ವಾರ್ಷಿಕ ಪ್ರೋತ್ಸಾಹ ಶ್ರೀತ್ಸಾಹ ಧನ ಘೋಷಿಸಬೇಕು ಎಂಬುದು ಅವರ ಮನವಿ.
ಗ್ರಾಮೀಣ ಪ್ರದೇಶದಲ್ಲಿ ಮನುಜ ಹುಟ್ಟಿನಿಂದಸಾವಿನವರೆಗೂ ಕುಂಬಾರರ ವಸ್ತುಗಳು ಬೇಕೆ ಬೇಕಾಗಿವೆ. ಸಂಪ್ರದಾಯಗಳು ಇನ್ನು ಜೀವಂತವಾಗಿವೆ. ಗ್ರಾಮೀಣ ಭಾಗದಲ್ಲಿ ಅನೇಕ ಕುಟುಂಬಗಳು ಅಡುಗೆ ಮಾಡುವ ಪರಿಕರಗಳಾಗಿ ಮಣ್ಣಿನ ಮಡಿಕೆಗಳನ್ನು ಬಳಸುತ್ತಿದ್ದರುಕಾಲಕ್ರಮೇಣ ಬದಲಾವಣೆ ಗಾಳಿಗೆ ಸಿಲುಕಿ ಇಂದು ಅಡುಗೆ ಮನೆಯಿಂದ ಮಣ್ಣಿನ ಮಡಿಕೆಗಳು ನಾಪತ್ತೆಯಾಗಿದ್ದರೂ ಮತ್ತೆ ತಲೆಯತ್ತುತ್ತಿವೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 