ಎಲ್ಲರೂ ಒಗ್ಗಟ್ಟು ಇದ್ದರೆ ಸಮುದಾಯದ ಅಭಿವೃದ್ಧಿ ಸಾಧ್ಯತೆ : ಅನಿಲ್ ನಾಯ್ಡು
Community development is possible if everyone is united: Anil Naidu
ಎಲ್ಲರೂ ಒಗ್ಗಟ್ಟು ಇದ್ದರೆ ಸಮುದಾಯದ ಅಭಿವೃದ್ಧಿ ಸಾಧ್ಯತೆ : ಅನಿಲ್ ನಾಯ್ಡು
ಬಳ್ಳಾರಿ 10: ಬಲಿಜ ಸಮುದಾಯದ ಬಾಂಧವರು ಒಗ್ಗಟ್ಟಿನಿಂದ ಮಾತ್ರ ಸಮಾಜದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಿ.ಜೆ.ಪಿ ಜಿಲ್ಲಾಧ್ಯಕ್ಷರ ಮತ್ತು ಬಲಿಜ ಸಮಾಜದ ಮುಖಂಡರಾದ ಅನಿಲ್ ನಾಯ್ಡು ತಿಳಿಸಿದರು.
ಅವರು ಸೋಮವಾರದಂದು ಬಳ್ಳಾರಿ ದತ್ತಾಸಾಯಿ ನಗರದ ಎಂ ವೇಣುಗೋಪಾಲ್ ಮನೆಯ ಹತ್ತಿರ ದೇವಿನಗರ ಶ್ರೀನಿವಾಸ್ ರವರು ನೇತೃತ್ವದಲ್ಲಿ ಏರಿ್ಡಸಿದ್ದ ಬಲಿಜ ಸಮಾಜದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಆನಂದ್ ರೆಡ್ಡಿ ಮಾತಾಡಿ ಬಲಿಜ ಬಾಂಧವರು ಒಗ್ಗಟ್ಟಾಗಿ ಬಾಳಬೇಕಂದು ಸಮುದಾಯದ ಜನರಿಗೆ ಕರೆ ನೀಡಿದರು. ಅದರಂತೆ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಈ ಕಾರ್ಯಕ್ರಮದಲ್ಲಿ ಜೆಡ್.ಪಿ ಶ್ರೀರಾಮುಲು, ಎ.ಎಲ್.ಕುಮಾರಸ್ವಾಮಿ, ಬ್ಯಾಂಕ್ ವಿಜಯಕುಮಾರ್, ಪಟೇಲ್ ನಗರ್ ರಾಜೇಶ್, ಬ್ಯಾಂಕ್ ರಾಮಕೃಷ್ಣ, ಪಟೇಲ್ ನಗರ ರಾಜೇಶೇಖರ್, ಪಟೇಲ್ ನಗರ್ ಏರಿಸ್ವಾಮಿ ಸೇರಿದಂತೆ ಬಲಿಜ ಸಮಾಜದ ಅನೇಕ ಮುಖಂಡರುಗಳು ಯುವ ಮುಖಂಡರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಆನಂದ್ ರೆಡ್ಡಿ, ಕೆಎಂಟಿ ಟ್ರೇಡರ್ಸ್, ಬಳ್ಳಾರಿ ಇವರನ್ನು ಸನ್ಮಾನಿಸಲಾಯಿತು ಎಂದು ಬಲಿಜ ಸಮಾಜದ ಪ್ರಧಾನ ಸೇವಕರಾದ ದೇವಿನಗರ ಶ್ರೀನಿವಾಸ್ ತಿಳಿಸಿದ್ದಾರೆ.
ಈ ಕಾರ್ಯಕ್ರದಲ್ಲಿ ಬಲಿಜ ಸಮುದಾಯದ ಅಶೋಕ್, ಶಶಿ, ಜಾಂಬು ಸೇರಿದಂತೆ ಸಮುದಾಯದ ಹಲವಾರು ಮುಖಂಡರು ಮತ್ತು ಯುವಕರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 