ದೀಪ ಹಚ್ಚುವ ಮೂಲಕ ಸಂವಿಧಾನ ಶಿಲ್ಪಿಯ ಜಯಂತಿ
ಲೋಕದರ್ಶನ ವರದಿ
ಗದಗ 10: ಡಾ. ಬಿ. ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ನಾವೆಲ್ಲರೂ ಸೇರಿ ಭಾರತ ಭಾಗ್ಯವಿಧಾತನ ಜಯಂತಿಯನ್ನು ವಿಶ್ವದಲ್ಲಿ ಅರ್ಥಪೂರ್ಣವಾಗಿ ನಮ್ಮ ನಮ್ಮ ಮನೆಯಲ್ಲಿ 14 ದೀಪಗಳನ್ನು ಹಚ್ಚಿ ಆಚರಿಸೋಣ. ಅಂಬೇಡ್ಕರ್ ಜಯಂತಿಯನ್ನು ಬಹಳ ಜನ ಬಹಳ ವಿಜೃಂಭಣೆಯಿಂದ ಮಾಡುವುದು ನಮ್ಮ ಅಭಿಮಾನ ಆದರೆ ಕೊರೊನಾ ಭೀತಿಯಿಂದ ಅಂಬೇಡ್ಕರ್ ಜಯಂತಿಯನ್ನು ಈ ಭಾರಿ ಮಾಡಲು ಸಾಧ್ಯವಿಲ್ಲ ಎಂದು ಮನೆಯಲ್ಲೇ ಕೂತು ಯೋಚಿಸುವ ಅಗತ್ಯವಿಲ್ಲ. ಮನೆಯಲ್ಲೇ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟು 14ದೀಪಗಳನ್ನು ಹಚ್ಚೋಣ ಅಂಬೇಡ್ಕರ್ ಹಬ್ಬವನ್ನು ಸಂಭ್ರಮ ಪಡೋಣ, ನಮ್ಮ ಮನಸ್ಸಿನಲ್ಲಿ ನಮ್ಮ ಮನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬರು ಇದ್ದಾರೆ ಅನ್ನೋದನ್ನ ತೋರಿಸೋಣ ಮನೆಯಲ್ಲೆ ಇದ್ದು ನಮ್ಮ ನಮ್ಮ ಮಕ್ಕಳಿಗೆ ಜೈ ಭೀಮ್ ಪಾಠ ಹೇಳಿ ಕೊಡೋಣ ಅಂಬೇಡ್ಕರ್ ರವರನ್ನು ಮತ್ತೆ ಮತ್ತೆ ಓದಿಕೊಳ್ಳೋಣ ಆಗ ನಮಗೂ, ನಮ್ಮ ಮಕ್ಕಳಿಗೂ ಅಂಬೇಡ್ಕರ್ ಅರ್ಥವಾಗುತ್ತಾರೆ. ಎಂದು ರಾಮಣ್ಣ ಬಿ ಗಡದವರ್ ಅಂಬೇಡ್ಕರ್ ಸೇನೆ ಗದಗ ಜಿಲ್ಲಾಧ್ಯಕ್ಷರು ಹಾಗೂ ಲಕ್ಷ್ಮೇಶ್ವರ ಪುರಸಭೆಯ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 