ಮಲೇರಿಯಾ ನಿರ್ಮೂಲನೆಗೆ ಸಹಕರಿಸಿ: ಶಾಸಕ ಬಂಡಿ
ಲೋಕದರ್ಶನ ವರದಿ
ಗಜೇಂದ್ರಗಡ 04: ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆಗೋಳಿಸಲು ಸಾಧ್ಯವಿಲ್ಲ ಸಮುದಾಯದ ಸಹಭಾಗಿತ್ವದೊಂದಿಗೆ ಮಲೇರಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆಗೆ ಮಾಡಲು ಸಾಧ್ಯವಿದೆ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಅವರು ಪಟ್ಟಣದ ಸರ್ಕಾರಿ ಪ.ಪೂ ಕಾಲೇಜಿನಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಶುನ್ಯ ಮಲೇರಿಯಾ ನನ್ನಿಂದ ಆರಂಭ ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಮಲೇರಿಯಾ, ಡೆಂಗೂ, ಚಿಕನಗುನ್ಯಾದಂತಹ ಮಾರಕ ರೋಗಗಳ ಮುಕ್ತ ಸಾಮಾಜ ಆರೋಗ್ಯಕರ ವಾತಾವರಣನಿರ್ಮಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜನತೆಯು ಕೈಜೋಡಿಸಬೇಕು ಇದರಿಂದ ಮಲೇರಿಯಾದಂತ ಪ್ರಕರಣಗಳು ಕಡಿಮೆಯಾಗಲು ಸಾಧ್ಯ ಎಂದರು.
ಜಿಲ್ಲಾ ವೈದ್ಯಾಧಿಕಾರಿಯಾದ ಕೆ ಅರುಂಧತಿ ಮಾತನಾಡಿ ಶುನ್ಯ ಮಲೇರಿಯಾ ನನ್ನಿಂದ ಆರಂಭ ಎಂಬ ಈ ವರ್ಷದ ಘೋಷಾವಾಕ್ಯದಡಿಯಲ್ಲಿ ಜನಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಪರಿಸರದಲ್ಲಿ ಮತ್ತು ನಮ್ಮ ಮನೆಗಳ ಸುತ್ತಾ ಬಿದ್ದಿರುವ ತ್ಯಾಜ್ಯದಿಂದ ಅನಾಫೆಲಿಸ್ ಸೊಳ್ಳೆ ಉತ್ಪಾದನೆಯಿಂದ ರೋಗ ಹರಡುತ್ತದೆ. ಯಾರಿಗೆ ಆಗಲಿ ಚಳಿಜ್ವರ, ನಡುಕ, ತಲೆನೋವು ಈ ರೋಗದ ಲಕ್ಷಣವಾಗಿದ್ದು ತಕ್ಷಣವೇ ಪಕ್ಕದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಕರೆ ನೀಡಿದರು.
ತಾಲೂಕಾ ವ್ಯದ್ಯಾಧಿಕಾರಿ ಬಿ ಎಸ್ ಭಜೇಂತ್ರಿ, ವೈದ್ಯರಾದ ಎಂ ಎಚ್ ಹೊಸಮನಿ, ಕೃಷ್ಣಾಭಾಯಿ ಕಮತರ, ಎಂ ಎಸ್ ಜಾಧವ, ಹೊಣಕೇರಿ ಸೇರಿದಂತೆ ಪುರಸಭೆಯ ಸರ್ವ ಸದಸ್ಯರ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 