ವನ್ಯಜೀವಿಗಳ ಸಂಘರ್ಷ ತಡೆಗೆ ಸಮನ್ವಯತೆ ಅಗತ್ಯ: ಡಾ.ಕೆ.ಎನ್ ಬಸವರಾಜ
Coordination is necessary to prevent wildlife conflicts: Dr. K.N. Basavaraj
ಬಳ್ಳಾರಿ 15: ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಮಾನವ- ವನ್ಯಜೀವಿಗಳ ಸಂಘರ್ಷ ತಡೆಗಟ್ಟಬಹುದಾಗಿದೆ ಎಂದು ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಅವರು ಹೇಳಿದರು.
ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಕಾಯ್ದೆ ಹಾಗೂ ಅಪರಾಧಗಳ ವೈಜ್ಞಾನಿಕ ತನಿಖೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಳ್ಳಾರಿ ಪ್ರಾದೇಶಿಕ ವಿಭಾಗದ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಹಾಗೂ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಾಧಿಕಾರಿಗಳಿಗೆ ಸಂಡೂರಿನ ಗುರುಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ಅರಣ್ಯ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಹಾಗೂ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸೇವಾ ನಿಯಮಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.
ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋದ ಸಹಾಯಕ ನಿರ್ದೇಶಕ ಶೇಷಾದ್ರಿ, ಆರೋಗ್ಯ ಇಲಾಖೆಯ ಸೂಪರಿಂಟೆಂಡೆಂಟ್ ವೆಂಕಟೇಶ್, ಮತ್ತು ನಿವೃತ್ತ ಡಿಸಿಎಫ್ ಸಿಎಂ ಅಮ್ಮಣ್ಣವರ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಶುಸಂಗೋಪನೆಯ ಇಲಾಖೆಯ ಉಪನಿರ್ದೇಶಕ ಡಾ.ಎಸ್ ಉಪ್ಪಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 