ಡಿಜಿಪಿ ರಾಮಚಂದ್ರ ರಾವ್ ಅಮಾನತು
DGP Ramachandra Rao suspended
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿದ್ದುಕೊಂಡು, ಕಚೇರಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ಆಕ್ಷೇಪಾರ್ಹ ವಿಡಿಯೋಗಳು ಮತ್ತು ಆಡಿಯೋ ಕ್ಲಿಪ್ಗಳು ಭಾರಿ ಸಂಚಲನ ಮೂಡಿಸಿದ್ದವು. ಈ ಬೆಳವಣಿಗೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರಿ ಎಷ್ಟೇ ಪ್ರಭಾವಿಯಾಗಿದ್ದರೂ ಶಿಸ್ತು ಕ್ರಮ ಅನಿವಾರ್ಯ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸೋಮವಾರ ತಡರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಅಮಾನತು ಆದೇಶ ಹೊರಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುಮಾರು 47 ಸೆಕೆಂಡಿನ ವೈರಲ್ ವಿಡಿಯೋದಲ್ಲಿ ಡಿಜಿಪಿ ರಾಮಚಂದ್ರ ರಾವ್ ಮಹಿಳೆಯರಿಗೆ ಮುತ್ತುಕೊಡುವುದು, ತಬ್ಬಿಕೊಳ್ಳುವುದು ಸೇರಿ ಅಸಭ್ಯವಾಗಿ ವರ್ತಿಸಿದ್ದಾರೆ. ವಿಡಿಯೋದಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಒಬ್ಬಳೇ ಮಹಿಳೆ ಬೇರೆ ಬೇರೆ ಉಡುಪಿನಲ್ಲಿ ಇದ್ದಾಳೆ ಎನ್ನಲಾಗಿದೆ. ಇನ್ನು ರಾಮಚಂದ್ರರಾವ್ ತಮ್ಮ ಇಲಾಖೆ ಹಾಗೂ ಕಚೇರಿಯ ಮಹಿಳಾ ಅಧಿಕಾರಿ-ಸಿಬ್ಬಂದಿಯನ್ನೇ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಡಿಜಿಪಿ ಸಮರ್ಥನೆ: ಈ ನಡುವೆ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿರುವ ರಾಮಚಂದ್ರ ರಾವ್, "ಇದೆಲ್ಲವೂ ಫ್ಯಾಬ್ರಿಕೇಟೆಡ್ (ಸೃಷ್ಟಿಸಿದ) ವಿಡಿಯೋಗಳು. ನನ್ನ ಘನತೆಗೆ ಧಕ್ಕೆ ತರಲು ಎಐ (AI) ತಂತ್ರಜ್ಞಾನ ಬಳಸಿ ಇಂತಹ ಕೃತ್ಯ ಎಸಗಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 