ದಾನಮ್ಮದೇವಿ ಸಭಾಮಂಟಪ ಭೂಮಿ ಪೂಜೆ
Danammadevi Sabhamantapa Bhoomi Puja
ದಾನಮ್ಮದೇವಿ ಸಭಾಮಂಟಪ ಭೂಮಿ ಪೂಜೆ
ಇಂಡಿ 27: ಭಕ್ತಿಯಿಂದ ಪ್ರಾರ್ಥನೆ ಮಾಡಿದವರಿಗೆ ವರದ ಹಸ್ತವನ್ನು ನೀಡುವ ವರದಾನೇಶ್ವರಿಯೆಂದೇ ಪ್ರಖ್ಯಾತಳಾದ ದಾನಮದೇವಿಯ ಹೆಸರಿನಲ್ಲಿ ಸಭಾಭವನ ನಿರ್ಮಿಸುವ ಮೂಲಕ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ಕೆ ಸಭಾಭವನ ಅಣಿಯಾಗಲಿಯೆಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶ್ರೀಗಳು ಹೇಳಿದರು. ನಗರದ ದಾನಮ್ಮದೇವಿ ದೇವಸ್ಥಾನದ ಪಕ್ಕದಲ್ಲಿ ವರದಾನೇಶ್ವರಿ ದಾನಮ್ಮದೇವಿ ಸಭಾಮಂಟಪದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ದೇವಸ್ಥಾನ ಕಮಿಟಿ ಅಧ್ಯಕ್ಷ ಉದ್ದಿಮೆದಾರ ಅನಿಲ ಪ್ರಸಾದ ಏಳಗಿ, ಸಿದ್ಧ ಸಿರಿ ಬ್ಯಾಂಕಿನ ನಿರ್ದೇಶಕ ಜಗದೀಶ ಕ್ಷತ್ರಿ, ರಮೇಶ ಗುತ್ತೆದಾರ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಅರವಿಂದ್ ಹಂಜಗಿ, ಮಲ್ಲಿಕಾರ್ಜುನ ಬುರಕುಲೆ, ಪ್ರಭು ದೇಸಾಯಿ, ದಾನಮ್ಮ ದೇವಿ ದೇವಸ್ಥಾನದ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 