ಬನಶಂಕರಿದೇವಿ ಜಾತ್ರೆ ಅಧ್ಧೂರಿ ಆಚರಣೆಗೆ ನಿರ್ಧಾರ
Decision for grand celebration of Banashankar Devi fair
ಬನಶಂಕರಿದೇವಿ ಜಾತ್ರೆ ಅಧ್ಧೂರಿ ಆಚರಣೆಗೆ ನಿರ್ಧಾರ
ಚಿಮ್ಮಡ,01: ಫೆ.12 ರಂದು ನಡೆಯಲಿರುವ ಗ್ರಾಮದ ಹಟಗಾರ ಸಮಾಜದ ಆರಾದ್ಯ ದೇವತೆ ಶ್ರೀ ಬನಶಂಕರಿದೇವಿ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮವನ್ನು ಅಧ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.
ಸ್ಥಳೀಯ ಬನಶಂಕರಿ ದೇವಸ್ಥಾನದಲ್ಲಿ ಶುಕ್ರವಾರ ಕರೆಯಲಾಗಿದ್ದ ಗ್ರಾಮದ ಸರ್ವ ಸಮಾಜ ಬಾಂಧವರ ಸಭೆಯಲ್ಲಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳಿಗೆ ಈ ಬಾರಿಯೂ ವಿಶೇಷ ಮಹಾಪ್ರಸಾದ ವಿತರಿಸುವ ಮೂಲಕ ಜಾತ್ರೆಯನ್ನು ಅಧ್ಧೂರಿಯಾಗಿ ಆಚರಿಸಲಾಗುವುದೆಂದು ಸಮಾಜದ ಪ್ರಮುಖರಾದ ಅಶೋಕ ಧಡೂತಿ ಸಭೆಯಲ್ಲಿ ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಪ್ರಮುಖರಾದ ಚಂದ್ರಕಾಂತ ಜಾಡಗೌಡರ ವಹಿಸಿದ್ದರು. ಪ್ರಮುಖರಾದ ರಾಮಣ್ಣ ಮುಗಳಖೋಡ, ಬಾಳಪ್ಪಾ ಹಳಿಂಗಳಿ, ಪುಂಡಲಿಕಪ್ಪಾ ಪೂಜಾರಿ, ಅಣ್ಣಪ್ಪಗೌಡ ಪಾಟೀಲ, ಗುರಲಿಂಗಪ್ಪ ಪೂಜಾರಿ, ರಾಚಯ್ಯ ಮಠಪತಿ, ಗ್ರಾ.ಪಂ ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪರ್ಪ ಪಾಲಭಾವಿ, ಬೀರ್ಪ ಹಳೆಮನಿ, ಗಿರಮಲ್ಲಪ್ಪಾ ಹಟ್ಟಿ, ಬಸವರಾಜ ಕುಂಚನೂರ, ಪರಾ್ಪ ಜಾಡಗೌಡರ ಸೇರಿದಂತೆ ಹಲವಾರು ಜನ ಪ್ರಮುಖರು ಆಗಮಿಸಿದ್ದರು.
ಜಾತ್ರಾ ಮಹೋತ್ಸವದಲ್ಲಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತಿದ್ದು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀದೇವಿಯ ಕ್ರಪೆಗೆ ಪಾತ್ರಾಗಬೇಕೆಂದು ಬನಶಂಕರಿದೇವಿ ಸೇವಾ ಸಮೀತಿಯ ಪ್ರಮುಖರು ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 