ಹಳೆ ಪಿಂಚಣಿಗಾಗಿ ಒತ್ತಾಯಿಸಿ, ರಾಜ್ಯ ಅ.ನೌಕರರ ಸಂಘದ ಪದಾಧಿಕಾರಿ ಶಿಕ್ಷಣ ಸಚಿವ ಮಧು ಬಂಗಾರ್ಪ ಮನವಿ ಪತ್ರ ಸಲ್ಲಿಕೆ
Demanding for old age pension, the office-bearer of the State A. Naukara Association has submitted
ಹಳೆ ಪಿಂಚಣಿಗಾಗಿ ಒತ್ತಾಯಿಸಿ, ರಾಜ್ಯ ಅ.ನೌಕರರ ಸಂಘದ ಪದಾಧಿಕಾರಿ ಶಿಕ್ಷಣ ಸಚಿವ ಮಧು ಬಂಗಾರ್ಪ ಮನವಿ ಪತ್ರ ಸಲ್ಲಿಕೆ
ಕಂಪ್ಲಿ:19 ಬೆಳಗಾವಿಯ ಸುವರ್ಣಸೌಧ ಅಧೀವೇಶನ ಮುಂಭಾಗದಲ್ಲಿ ಹಳೆ ಪಿಂಚಣಿಗಾಗಿ ಒತ್ತಾಯಿಸಿ, ರಾಜ್ಯ ಅನುದಾನಿತ ಶಾಲೆ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ಶಿಕ್ಷಣ ಸಚಿವ ಮಧು ಬಂಗಾರ್ಪಗೆ ಮನವಿ ಸಲ್ಲಿಸಿದ್ದೇವೆ ಎಂದು ಇಲ್ಲಿನ ಸಂಘದ ರಾಜ್ಯ ಸಹ ಕಾರ್ಯದರ್ಶಿ ಅಂಬಿಗರ ಮಂಜುನಾಥ ತಿಳಿಸಿದರು. ನಂತರ ಮಾತನಾಡಿ, ರಾಜ್ಯ ಅನುದಾನಿತ ಶಾಲಾ ಕಾಲೇಜು ನೌಕರರಿಗೆ ಪಿಂಚಣಿ ನೀಡುವ ಕುರಿತು ಪ್ರಣಾಳಿಕೆಯಲ್ಲಿ ಸರ್ಕಾರ ಪ್ರಕಟಿಸಿದ್ದು ಪಿಂಚಣಿ ನೀಡುವುದು ನಮ್ಮ ಹಕ್ಕಾಗಿದೆ. ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಕೊಡುವ ಕುರಿತು ಚರ್ಚೆ ಅಧಿವೇಶನದಲ್ಲಿ ಬಹುದೀರ್ಘ ನಡೆದಿದ್ದು ಪರೀಶೀಲಿಸಿ ಬೇಡಿಕೆ ಈಡೇರಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇ.80ರಷ್ಟು ಶಿಕ್ಷಕರ ನೇಮಕ ಮಾಡಲಾಗುವುದು. ಪಿಂಚಣಿ ಕೊಡುವುದು ಒಳ್ಳೆಯದಾಗಿದ್ದು ಕ್ಯಾಬಿನೇಟ್ನಲ್ಲಿ ಒತ್ತಾಯಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರ್ಪ ತಿಳಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಎಂಎಲ್ಸಿ ಶಶೀಲ್ ನಮೋಶಿ,ಸಿಂಧಗಿ ಶಾಸಕ ಅಶೋಕ ಮನಗುಳಿ, ಸಂಘದ ರಾಜ್ಯಾಧ್ಯಕ್ಷ ಜಿ.ಹನುಮಂತಪ್ಪ, ರಾಜ್ಯ ಗೌರವಾಧ್ಯಕ್ಷ ಎಚ್.ನಾಗರಾಜಪ್ಪ ಬುಕ್ಕಾಂಬುದಿ, ಪ್ರಚಾರ ಸಮಿತಿ ಅಧ್ಯಕ್ಷ ವೆಂಕಟಾಚಲ, ಪ್ರಧಾನ ಕಾರ್ಯದರ್ಶಿ ಮುತ್ತುರಾಜ್ ಮತ್ತಿಕೊಪ್ಪ, ಕಾರ್ಯದರ್ಶಿ ಲಕ್ಷ್ಮಿಪುತ್ರ ಕೀರನಹಳ್ಳಿ ಸೇರಿ ಪದಾಧಿಕಾರಿಗಳು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 