ಎಲ್ಲಾ ಕ್ಷೇತ್ರದ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ-ಪಟೇಲ್
Development of all sectors lies in the field of education - Patel
ಎಲ್ಲಾ ಕ್ಷೇತ್ರದ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ-ಪಟೇಲ್
ಕೊಪ್ಪಳ 03: ಯಾವುದೇ ಕ್ಷೇತ್ರ ಅಭಿವೃದ್ಧಿ ಹೊಂದಬೇಕೆಂದರೆ ಮೊದಲು ನಾವು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದ ಬೇಕು ಅಂದಾಗ ಮಾತ್ರ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯ ,ಎಲ್ಲಾ ಕ್ಷೇತ್ರದ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಅಭಿಪ್ರಾಯ ಪಟ್ಟರು, ಅವರು ನಿನ್ನೆ ನಗರದ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮುಂದುವರೆದು ಮಾತನಾಡಿ ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಮಕ್ಕಳ ಮುಂದಿನ ಭವಿಷ್ಯ ಉಜ್ವಲ ಗೊಳ್ಳಲು ಅವರಿಗೆ ಗುಣಮಟ್ಟದ ಶಿಕ್ಷಣ ಅವಶ್ಯಕವಾಗಿದೆ ಈ ದಿಶೆಯಲ್ಲಿ ಶಿಕ್ಷಕರು ಅತ್ಯಂತ ಕಾಳಜಿ ವಹಿಸಿ ತಮ್ಮ ಜವಾಬ್ದಾರಿ ನಿಭಾಯಿಸಬೇಕು, ಪಾಲಕರು ಕೂಡ ಶಿಕ್ಷಕರಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ, ನಮ್ಮ ಶಾಸಕ ಕೇರ್ ಆಗುವಂತೆ ರವರು ಶೈಕ್ಷಣಿಕ ಬೆಳವಣಿಗೆಗಾಗಿ ಸಾಕಷ್ಟು ಅನುದಾನವನ್ನು ಸರ್ಕಾರದಿಂದ ದೊರಕಿಸಿ ಕೊಟ್ಟಿದ್ದಾರೆ ಎಲ್ಲರೂ ಸೇರಿ ಶೈಕ್ಷಣಿಕ ಬೆಳವಣಿಗೆಗಾಗಿ ಶ್ರಮಿಸೋಣ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ತಿಳಿಸಿದರು, ಸಮಾರಂಭದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಶಂಕ್ರಯ್ಯ ವಹಿಸಿದ್ದರು, ವೇದಿಕೆ ಮೇಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಣ ಸಂಯೋಜಕರು ಸಹ ಶಿಕ್ಷಕರು ಮತ್ತು ಶಾಲೆಯ ಮುಖ್ಯ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳ ಪಾಲಕರು ಪಾಲ್ಗೊಂಡಿದ್ದರು ,ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿ ಜನ ಮನರಂಜಿಸಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 