ಚಿಕ್ಕೋಡಿ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹ
Dharani Satyagraha for Chikkodi district
ಚಿಕ್ಕೋಡಿ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹ
ಮಾಂಜರಿ 15: ಪ್ರತ್ಯೇಕ ಚಿಕ್ಕೋಡಿ ಜಿಲ್ಲೆಗಾಗಿ ನಡೆದ ಧರಣಿ ಸತ್ಯಾಗ್ರಹ 7 ನೇ ದಿನಕ್ಕೆ ಕಾಲಿಟ್ಟಿದೆ, ಇನ್ನೂವರೆಗೆ ಯಾವೊಬ್ಬ ಜನಪ್ರತಿನಿಧಿಗಳೂ ಸಹ ವೇದಿಕೆ ಕಡೆಗೆ ಸುಳಿಯದೇ ಇರುವುದು ವಿಶಾದಕರ ಸಂಗತಿಯಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ, ಧರಣಿ ನಿರತರ ಆರೋಗ್ಯ ತಪಾಸಣೆ ಮಾಡಲಾಯಿತು. ಕೇರೂರ ಗ್ರಾಮದ ಯುವಕರು ಚಿಕ್ಕೋಡಿ ಜಿಲ್ಲೆಯ ಹೋರಾಟಕ್ಕೆ ಬೆಂಬಲಿಸಿ ಜಿಲ್ಲಾ ಹೋರಾಟಗಾರರಿಗೆ ಶಕ್ತಿ ತುಂಬಿದರು.
ಯುವ ಹೋರಾಟಗಾರ ಪ್ರತಾಪಸಿಂಹ ಪಾಟೀಲ ಮಾತನಾಡಿ ಚಿಕ್ಕೋಡಿ ಜಿಲ್ಲೆ ಆಗುವುದರಿಂದ, ಆಡಳಿತದಲ್ಲಿ ಸುಧಾರಣೆ ಆಗುತ್ತದೆ, ಉದ್ಯಮಗಳು ಸ್ಥಾಪನೆಗೊಳ್ಳುತ್ತವೆ, ಇದರಿಂದ ಯುವಕರಿಗೆ ಉದ್ಯೋಗಗಳು ಸಿಗಲಿವೆ, ದೂರದ ಬೆಳಗಾವಿಗೆ ಕೆಲಸ ಕಾರ್ಯಕ್ಕಾಗಿ ಅಲೆದಾಡುವುದು ತಪ್ಪಲಿದೆ ಎಂದು ಹೇಳಿದರು.ಸಿದ್ದು ಕಾಂಬಳೆ, ಯಾಶೀನ ಜಮಾದಾರ, ಕೇದಾರಿ ಹುಬ್ಬಳ್ಳಿ, ಚಂದ್ರಕಾಂತ ಹುಕ್ಕೇರಿ, ಸಂಜು ಬಡಿಗೇರ, ಅಪ್ಪಾಸಾಹೇಬ ಹಿರೆಕೋಡಿ, ಚಿದಾನಂದ ಶಿರೋಳೆ, ಅಮೂಲ ನಾವಿ, ವಿಜಯ ಬ್ಯಾಳೆ, ಮಾಳು ಕರೆಣ್ಣವರ, ಸಂತೋಷ ಪೂಜೇರಿ, ಪ್ರಮೋದ್ ಪಾಟೀಲ, ಸುರೇಶ ಜಿಡ್ಡಿಮನಿ, ಆನಂದ ಮಗದುಮ್ ಹಾಗೂ ಇತರ ಹೋರಾಟಗಾರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 