ಅಕ್ರಮ ಮರಳು ದಂದೆ: ಜಿಲ್ಲಾಧಿಕಾರಿ ದಿಢೀರ್ ಭೇಟಿ
ರಾಣೇಬೆನ್ನೂರ 11- ತಾಲೂಕಿನ ಐರಣಿ ಗ್ರಾಮದ ಬಳಿ ತುಂಗಭದ್ರಾ ನದಿ ತಟದಲ್ಲಿ ಮರಳು ಸಂಗ್ರಹಿಸುವ ಕೇಂದ್ರವೊಂದಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಸಕರ್ಾರದ ನಿಯಮ ಮೀರಿ ನದಿಯಿಂದ ಮರಳು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ ಎಂಬ ಸಾರ್ವಜನಿಕ ದೂರುಗಳ ಹಿನ್ನಲೆಯಲ್ಲಿ ಮರಳು ತುಂಬುವ ಕೇಂದ್ರಗಳಿಗೆ ಭೇಟಿ ನೀಡಲಾಗಿದೆ, ಯಂತ್ರಗಳನ್ನು ಬಳಸಿ ನದಿಯಿಂದ ಮರಳನ್ನು ಹೊರ ತೆಗೆಯಬಾರದು, ಈ ನಿಯಮವನ್ನು ಉಲ್ಲಂಘಿಸುವಂತಿಲ್ಲ. ಪ್ರಕೃತಿಯ ಸಂಪತ್ತು ರಕ್ಷಿಸಿಸುವುದು ಎಲ್ಲರ ಹೊಣೆಯಾಗಿದೆ ಎಂದರು.
ಮರಳು ಸಂಗ್ರಹಿಸುವ 3ನೇ ಕೇಂದ್ರದಲ್ಲಿ ಇದ್ದಂತಹ 2 ಜೆಸಿಬಿ, 1 ಇಟಾಚಿ, 1 ಟ್ರ್ಯಾಕ್ಟರ್, ಮೂರು ಸ್ಯಾಂಡ್ ಪಿಲ್ಟರ್ ಮಾಡುವ ಆಯಿಲ್ ಮೆಷಿನ್ಗಳನ್ನು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪೊಲೀಸರು ವಶಕ್ಕೆ ಪಡೆದರು. ತಹಶೀಲ್ದಾರ್ ಸಿ.ಎಸ್.ಕುಲಕಣರ್ಿ, ಸಿಪಿಐ ಸುರೇಶ್ ಸಗರಿ, ಕಂದಾಯ ನಿರೀಕ್ಷಕ ಎಚ್.ಕೆ.ಚಲವಾದಿ, ಗ್ರಾಮ ಲೆಕ್ಕಾಧಿಕಾರಿ ಯುವರಾಜ್ ನಾಯ್ಕ, ಪ್ರಕಾಶ್ ಮತ್ತಿತರರು ಸೇರಿದಂತೆ ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 