3ತಿಂಗಳು ಕಳೆದರು ಬಿಲ್ ಸಂದಾಯ ಮಾಡದೇ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆಂದು ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷ ಹಿರೇಮಠ ಆಗ್ರಹ
District President of Kisan Sangh Virupaksha Hiremath demanded that they are doing injustice to the
3ತಿಂಗಳು ಕಳೆದರು ಬಿಲ್ ಸಂದಾಯ ಮಾಡದೇ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆಂದು ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷ ಹಿರೇಮಠ ಆಗ್ರಹ
ಬೀಳಗಿ, 03; ಕಬ್ಬು ನಿಯಂತ್ರಣ ಆದೇಶದನ್ವಯ ಕಬ್ಬು ಸರಬರಾಜು ಮಾಡಿದ ರೈತರಿಗೆ 14 ದಿನದೊಳಗಾಗಿ ಸಂಬಂಧಿಸಿದ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಲೆಯನ್ನು ಸಂದಾಯ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ರೈತರ ಮನವಿಗೆ ಸ್ಪಂದಿಸಿ ಆದೇಶ ಹೊರಡಿಸಿದ್ದರು. ಇದನ್ನು ತಿರಸ್ಕರಿಸಿ 3ತಿಂಗಳು ಕಳೆದರು ಬಿಲ್ ಸಂದಾಯ ಮಾಡದೇ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆಂದು ಸಕ್ಕರೆ ಕಾರ್ಖಾನೆ ಮಾಲಿಕರ ಮತ್ತು ಆಡಳಿತ ಮಂಡಳಿಯ ಮೇಲೆ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷ ಹಿರೇಮಠ ಹರಿಹಾಯ್ದಿದ್ದಾರೆ.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇವರು ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಮತ್ತು ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿಗಳು ಇಗಾಗಲೇ ಸೂಚಿಸಿದಂತೆ ರೈತರ ಕಬ್ಬಿನ ಬಿಲ್ 15 ದಿನದೊಳಗಾಗಿ ಪೂರೈಸಬೇಕು ಹಾಗೂ ಒಂದೇ ದರ ನೀಡಬೇಕು, ತಪ್ಪಿದಲ್ಲಿ ವಿಳಂಬಿತ ಅವಧಿಗೆ ವಾರ್ಷಿಕ ಶೇಕಡಾ 15ರಷ್ಟು ಬಡ್ಡಿಯನ್ನು ರೈತರಿಗೆ ಸಂದಾಯ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಇವರ ಆದೇಶಕ್ಕೆ ಮನ್ನಣೆ ನೀಡದೆ ಮತ್ತೇ ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿರುವುದು ರೈತ ಸಂಘವು ಸಹಿಸುವುದಿಲ್ಲ. ಶೀಘ್ರವಾಗಿ ರೈತರಿಗೆ ಕಬ್ಬಿನ ಬಿಲ್ ನೀಡಬೇಕು. ಸಾಲ-ಸೂಲ ಮಾಡಿ ರೈತರು ಕಬ್ಬು ಬೆಳೆದು ಕಷ್ಟದಲ್ಲಿ ಸಿಲುಕಿ ನೋವು ಅನುಭವಿಸುತ್ತಿರುತ್ತಾರೆ. ಸಂಸಾರ, ಮಕ್ಕಳ ಶಾಲೆ, ಮದುವೆ ಸೇರಿದಂತೆ ಕಷ್ಟದ ಜಂಜಾಟದಲ್ಲಿ ರೈತರು ಬಳಲುತ್ತಿರುತ್ತಾರೆ. ಸಕ್ಕರೆ ಕಾರ್ಖಾನೆ ಮಾಲಿಕರು ಮತ್ತು ಆಡಳಿತ ಮಂಡಳಿಯವರು ಜಿಲ್ಲಾಧಿಕಾರಿಗಳು ಹೇಳಿದಂತೆ ಕಬ್ಬಿನ ಬಿಲ್ ಸಂದಾಯ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕು. ಇಲ್ಲವಾದರೆ ಜಿಲ್ಲೆಯ ಎಲ್ಲ ರೈತರು ಸಾಮೂಹಿಕವಾಗಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 