ಡಾ. ಶಿವಬಸವ ಮಹಾಸ್ವಾಮಿಗಳ 135 ನೇ ಜಯಂತಿ ಮಹೋತ್ಸವ
ಜಯಂತಿ ಮಹೋತ್ಸವ
ಡಾ. ಶಿವಬಸವ ಮಹಾಸ್ವಾಮಿಗಳ 135 ನೇ ಜಯಂತಿ ಮಹೋತ್ಸವ
ಬೆಳಗಾವಿ 25 : ನಾಡಿನ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡುವುದರ ಮೂಲಕ ಕಾಯಕಯೋಗಿ, ಮಹಾಪ್ರಸಾದಿ ಎನಿಸಿದ್ದ ನಾಗನೂರು ರುದ್ರಾಕ್ಷಿ ಮಠದ ಡಾ. ಶಿವಬಸವ ಮಹಾಸ್ವಾಮಿಗಳವರ 135 ನೇ ಜಯಂತಿ ಮಹೋತ್ಸವ ಅಂಗವಾಗಿ ನವೆಂಬರ್ 26ರಿಂದ ಡಿಸೆಂಬರ್ 4 ರ ವರೆಗೆ ಸಂಜೆ 6 ಗಂಟೆಗೆ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಆರ್ ಎನ್ ಶೆಟ್ಟಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಮಣಕವಾಡದ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳಿಂದ ಶರಣರ ಅನುಭವ ಕುರಿತು ಪ್ರವಚನ ನಡೆಯಲಿದೆ. ಮುಂದುವರೆದು ಶ್ರೀಗಳ ಜಯಂತಿ ಮಹೋತ್ಸವದ ಅಂಗವಾಗಿ ಡಿಸೆಂಬರ್ 5 ರಿಂದ ಡಿಸೆಂಬರ್ 8ರವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇಲ್ಲಿ ಕನ್ನಡ ನುಡಿಶ್ರೀ, ಸೇವಾರತ್ನ, ಆತ್ಮಸ್ವಾಸ್ಥ್ಯ ಶ್ರೀ, ಪ್ರಸಾದಶ್ರೀ ಮುಂತಾದ ಪ್ರಶಸ್ತಿಗಳನ್ನು ನಾಡಿನ ಸಾಧಕರಿಗೆ ನೀಡಲಾಗುವುದು ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 