ಶಿಗ್ಲಿ ಪಂಚಾಯತಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಶಿಗ್ಲಿ ಪಂಚಾಯತಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ Dr. B.R. Ambedkar Jayanti celebration in Shigli Panchayat

ಲಕ್ಷ್ಮೇಶ್ವರ 16 :  ಭಾರತದ ಸಂವಿಧಾನ ಬರೆದ ಮಹಾಶಿಲ್ಪಿ ಸಮಾಜ ಸುಧಾರಕ ಅರ್ಥಶಾಸ್ತ್ರಜ್ಞ ನ್ಯಾಯವಾದಿ ದಿನ ದಲಿತರ ಮಹಿಳೆಯರ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿ ಅಸ್ಪೃಶ್ಯತೆ ವಿರುದ್ಧ ಆಂದೋಲನದ ನೇತೃತ್ವ ವಹಿಸಿ ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿ ಬುದ್ಧ ಧರ್ಮವನ್ನು ಸ್ವೀಕರಿಸಿದ ಮಹಾನ್ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಶಿಗ್ಲಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರವಿ ಕೊರಕನವರ ಹೇಳಿದರು. ಅವರು ಪಂಚಾಯಿತಿ ಕಾರ್ಯಾಲಯದಲ್ಲಿ ಮಂಗಳವಾರ ಡಾ.ಬಿ. ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸಿ ಮಾತನಾಡಿದ ಅವರು ಡಾ ಬಿ ಆರ್ ಅಂಬೇಡ್ಕರ ತಮ್ಮ ಜೀವಿತಾವ ಅಧಿವರಿಗೂ ತಮಗಾಗಿ ಏನೆನ್ನು ಬಯಸದೆ ಬಡವರ ದೀನ ದಲಿತರ ಶೋಷಿತರ ಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸಿದ ಮಹಾ ನಾಯಕ ಅವರ ಬರೆದ ಸವಿಧಾನದ ಹಾದಿಯಲ್ಲಿ ನಾವೆಲ್ಲರೂ ಸಾಗೋಣ ಎಂದರು. ಈ ಸಮಯದಲ್ಲಿ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗದವರು ಗ್ರಾಮದ ಮುಖಂಡರು ಮುದ್ದು ಮಕ್ಕಳು ಪಾಲ್ಗೊಂಡಿದ್ದರು.