21 ನೇ ಜಾನುವಾರು ಗಣತಿಗೆ ಚಾಲನೆ
Drive for 21st Livestock Census
21 ನೇ ಜಾನುವಾರು ಗಣತಿಗೆ ಚಾಲನೆ
ಹಾನಗಲ್ 11: ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯಿಂದ ಕೈಗೊಳ್ಳಲಾಗಿರುವ 21 ನೇ ಜಾನುವಾರು ಗಣತಿ 2024 ಹಿನ್ನೆಲೆಯಲ್ಲಿ ಪ್ರಕಟಿಸಲಾಗಿರುವ ಕರಪತ್ರಗಳನ್ನು ಅನಾವರಣಗೊಳಿಸುವ ಮೂಲಕ ಇಲ್ಲಿ ಶಾಸಕ ಶ್ರೀನಿವಾಸ ಮಾನೆ ಗಣತಿಗೆ ಚಾಲನೆ ನೀಡಿದರು.
ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಗಣತಿಯಿಂದ ಪಶು ಸಂಗೋಪನೆ ಅಭಿವೃದ್ಧಿ, ಮೇವಿನ ಲಭ್ಯತೆ,ಆರೋಗ್ಯ, ಓಷಧೋಪಚಾರ, ಉತ್ಪಾದಕತೆ ಹೆಚ್ಚಿಸಲು ಹಾಗೂ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿದೆ.ಒಂದು ಊರೂ ಸಹ ಬಿಡದಂತೆ ಎಲ್ಲ ಕಡೆಗಳಲ್ಲಿ ತೆರಳಿ ಗಣತಿ ಕಾರ್ಯದಲ್ಲಿ ಸಮರ್ಕವಾಗಿ ತೊಡಗಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಶಾಸಕ ಮಾನೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯ ಪಶು ವೈದ್ಯಾಧಿಕಾರಿ ಡಾ.ಗೀರೀಶ ರೆಡ್ಡೇರ ಮಾತನಾಡಿ, ತಾಲೂಕಿನಲ್ಲಿ 14 ಜನ ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಲಿದ್ದು, ಮೂವರು ವೈದ್ಯಾಧಿಕಾರಿಗಳು ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಗಣತಿ ಕಾರ್ಯದಲ್ಲಿ ಜಾನುವಾರುಗಳ ಪರಿಪೂರ್ಣ ಮಾಹಿತಿ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 