ಮತದಾನ ಜಾಗೃತಿ ಜಾಥಕ್ಕೆ ಚಾಲನೆ
ಲೋಕದರ್ಶನ
ವರದಿ
ಕಂಪ್ಲಿ 24:
ನ.3ರಂದು ನಡೆಯುವ ಲೋಕಸಭಾ
ಉಪ ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಮತಚಲಾಯಿಸಬೇಕು ಎಂದು ತಹಶೀಲ್ದಾರ ದಿವಾಕರ
ರೆಡ್ಡಿ ಹೇಳಿದರು.
ತಾಲೂಕಿನ ಉದ್ಭವ ಮಹಾಗಣಪತಿ ದೇವಸ್ಥಾನ ಬಳಿಯಲ್ಲಿ ತಹಶೀಲ್ದಾರರ ಕಛೇರಿ ಹಾಗೂ ಪುರಸಭೆಯ ಸಹಯೋಗದಲ್ಲಿ
ನಿನ್ನೆ ಹಮ್ಮಿಕೊಂಡಿದ್ದ 'ಮತದಾನ ಜಾಗೃತಿ ಜಾಥ'ಕ್ಕೆ ಚಾಲನೆ
ನೀಡಿ ಮಾತನಾಡಿ, ಬಳ್ಳಾರಿ ಲೋಕಸಭಾ ಉಪ ಚುನಾವಣೆ ನ.3ರಂದು ನಡೆಯಲಿದೆ. 18 ವರ್ಷ
ಮೇಲ್ಪಟ್ಟ ಯುವಕ, ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.
ಪ್ರತಿಯೊಬ್ಬರು ಮತದಾನದ ಜಾಗೃತಿಯೊಂದಿಗೆ ಶೇ.100ಕ್ಕೆ ನೂರರಷ್ಟು ಮತದಾನ
ಮಾಡಬೇಕು. ಮತದಾರರು ಹಣ, ಆಮಿಷಗಳಿಗೆ ಕೈವೊಡ್ಡದೆ,
ನಿಭರ್ಿತಿಯಿಂದ ಮತಚಲಾಯಿಸಬೇಕು ಎಂದು ಹೇಳಿದರು.
ಉದ್ಭವ ಮಹಾಗಣಪತಿ ದೇವಸ್ಥಾನದಿಂದ ಆರಂಭಗೊಂಡು ಮತದಾನ ಜಾಗೃತಿ ಜಾಥವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ಉಪ
ತಹಶೀಲ್ದಾರ ಬಿ.ರವೀಂದ್ರಕುಮಾರ್, ಪುರಸಭೆ
ಹಿರಿಯ ನೈರ್ಮಲ್ಯ ನಿರೀಕ್ಷಕ ಸಿ.ಫಕೃದ್ದೀನ್, ಕಿರಿಯ
ನೈರ್ಮಲ್ಯ ನಿರೀಕ್ಷಕಿ ಎ.ಕೆ.ರಾಧಿಕಾ,
ಮಹಿಳಾ ಮೇಲ್ವಿಚಾರಕಿ ಲತೀಫಾಬೇಗಂ, ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕ ಚನ್ನಬಸವರಾಜ ಹಾಗೂ ಪುರಸಭೆ ಸಿಬ್ಬಂದಿಗಳು,
ಪೌರ ಕಾಮರ್ಿಕರು, ಅಂಗನವಾಡಿ ಕಾರ್ಯಕತರ್ೆಯರು, ಆಶಾ ಕಾರ್ಯಕತರ್ೆಯರು, ಸಕರ್ಾರಿ
ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 