ಸ್ವಚ್ಛತಾ ರಥಕ್ಕೆ ಚಾಲನೆ
ಗದಗ 15: ವಿಶ್ವ ಶೌಚಾಲಯ ದಿನಾಚರಣೆ-2018ರ ಪ್ರಯುಕ್ತ ಗದಗ ಜಿಲ್ಲಾಡಳಿತ ಭವನದಲ್ಲಿಂದು ಸ್ವಚ್ಛತಾ ರಥಕ್ಕೆ ಗದಗ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಎಸ್.ಪಿ. ಬಳಿಗಾರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಸ್ವಚ್ಛತಾ ರಥವು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸಂಚರಿಸಲಿದ್ದು ಗ್ರಾಮೀಣ ಪ್ರದೇಶದ ಕ್ಷೇತ್ರ ಮಟ್ಟದಲ್ಲಿ ಹಾಗೂ ಶಾಲಾ ಮಕ್ಕಳಲ್ಲಿ ನೈರ್ಮಲ್ಯದ ಅಭ್ಯಾಸಗಳನ್ನು ರೂಡಿಸುವ ಸಲುವಾಗಿ ಸ್ವಚ್ಛ ಭಾರತ ಮಿಷನ್ ಜನಾಂದೋಲನವನ್ನು ತೀವ್ರಗೊಳಿಸುವದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. ದಿ. 16ರಂದು ಶಾಲಾ ಮಕ್ಕಳಿಂದ ಜಾಥಾ, ಪ್ರಬಂಧ, ಚಚರ್ಾ ಸ್ಪಧರ್ೆಗಳನ್ನು ದಿ. 17 ರಂದು ಸೈಕಲ್ ಜಾಥಾ, ದಿ. 18ರಂದು ಮನೆ ಮನೆಗೆ ಭೇಟಿ ಕಾರ್ಯಕ್ರಮ, ದಿ. 19ರಂದು ಮೇಣದ ಬತ್ತಿ ಜಾಥಾ ಹಾಗೂ ಸ್ವಚ್ಛತಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 