ನಶಾ ಮುಕ್ತ ಭಾರತ ಅಭಿಯಾನ: ಚಿತ್ರಕಲಾ ಸ್ಪರ್ಧೆ
Drug Free India Campaign: Painting Competition
ನಶಾ ಮುಕ್ತ ಭಾರತ ಅಭಿಯಾನ: ಚಿತ್ರಕಲಾ ಸ್ಪರ್ಧೆ
ಹುಬ್ಬಳ್ಳಿ 15: ಇಂದು ನಗರದ ವಿಜಯ ಮಹಾಂತೇಶ ಲಲಿತ ಕಲಾಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಧಾರವಾಡ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಧಾರವಾಡ, ತಾಲೂಕು ಪಂಚಾಯತ ಹುಬ್ಬಳ್ಳಿ ಹಾಗೂ ಮೈತ್ರಿ ಸಮಗ್ರ ವ್ಯಸನಮುಕ್ತ ಪುನರ ವಸತಿ ಕೇಂದ್ರ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಡಾ.ಜಿ.ವಿ.ಓಂಕಾರಿಗೌಡ್ರ ಅವರು ಮಾತನಾಡಿ, ಭಾರತವು ಯುವ ಜನಾಂಗದಿಂದ ಕೂಡಿದ ಸದೃಢ ದೇಶ ಕಟ್ಟಲು ಯುವಕರ ಕೊಡುಗೆ ಅವಶ್ಯಕವಾಗಿರುತ್ತದೆ. ಆದರೆ ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ಹಲವಾರು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕಾರಣ ಇಂತಹ ವ್ಯಸನಗಳಿಂದ ದೂರವಾಗಿ ಆರೋಗ್ಯಕರಾಗಿ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿಜಯ ಮಹಾಂತೇಶ ಲಲಿತ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಆರ್.ಎಫ್. ಹಿರೇಗೌಡರ ಮಾತನಾಡಿ, ಯುವ ಪೀಳಿಗೆಯ ಮಾರಕ ದುಶ್ಚಟಗಳಿಗೆ ದಾಸರಾಗದೇ, ನಶಾ ವಸ್ತುಗಳಿಂದ ದೂರವಿದ್ದು, ಸದೃಢವಂತರಾಗಬೇಕೆಂದು ಅವರು ತಿಳಿಸಿದರು. ಮೈತ್ರಿ ಸಂಸ್ಥೆಯ ಮಂಜುನಾಥ ಮುದಿಗೌಡ್ರ, ಶಿವಾನಂದ ಚೌಗಲೆ, ಕಲ್ಮೇಶ್ ಬೆಳೆಬಾಳ ಇವರು ಕೂಡ ನಶಾ ಮುಕ್ತರಾಗುವಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ರಂಜಿತಾ, ಶರಾವತಿ, ಕಾಲೇಜಿನ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ವಿಕಲಚೇತನ ಗ್ರಾಮೀಣ ಪುನರವಸತಿ ಕಾರ್ಯಕರ್ತರು ಹಾಜರಿದ್ದರು. ಸಹ ಪ್ರಾಧ್ಯಾಪಕರಾದ ಸಿ.ಡಿ. ಜಟ್ಟೆನವರ ನಿರೂಪಿಸಿದರು. ಎಂ.ಆರ್. ಡಬ್ಲ್ಯೂ ಮಹಾಂತೇಶ ಕುರ್ತಕೋಟಿ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 