ಅಂಕ ಗಳಿಕೆ ಶಿಕ್ಷಣವಲ್ಲ: ತಹಸೀಲ್ದಾರ ಅನೀಲ ಬಡಿಗೇರ
Earning marks is not education: Tehsildar Anil Badigera
ಜಮಖಂಡಿ 06: ಶಾಲಾ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳುವ ಸುಂದರ ಘಟ್ಟ. ಅದು ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ, ನೈತಿಕ ಮೌಲ್ಯಗಳೊಂದಿಗೆ ಸಂಸ್ಕಾರವಂತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ತಹಸೀಲ್ದಾರ ಅನೀಲ ಬಡಿಗೇರ ಹೇಳಿದರು.
ತಾಲೂಕಿನ ತುಬಚಿ ಗ್ರಾಮದ ರಾಣಿ ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಎನ್ನುವುದು ನಿಂತ ನೀರಲ್ಲ, ಅದು ನಿರಂತರ ಪ್ರಕ್ರಿಯೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಡಿಜಿಟಲ್ ಯುಗದಲ್ಲಿ ಮಕ್ಕಳು ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ಜ್ಞಾನವಂತರಾಗಬೇಕು ಎಂದರು.
ಮಾಜಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್. ಸಿಂಧೂರ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಶಾಲಾ ವಾರ್ಷಿಕೋತ್ಸವಗಳ ಮುಖ್ಯ ಉದ್ದೇಶ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಈ ಶಾಲೆಯ ಅಭಿವೃದ್ಧಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದರು.
ಡಾ. ಸದಾಶಿವ ಬಾಲಪ್ಪನವರ ಮಾತನಾಡಿದರು, ಸಾನಿಧ್ಯ ವಹಿಸಿ ತುಬಚಿ ಹಾಗೂ ನಾಗನೂರು ರುದ್ರಾಕ್ಷಿ ಮಠದ ಡಾ, ಅಲ್ಲಮಪ್ರಭು ಮಹಾಸ್ವಾಮಿಗಳು ಆಶೀರ್ವಚನ ನಿಡಿದರು. ಇದೇ ಸಂದರ್ಭದಲ್ಲಿ ಗುರುರಾಜ ಕುಲಕರ್ಣಿ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ತೇಲಿ, ಶಿವಲಿಂಗಪ್ಪ ಕಿತ್ತೂರು, ಜಿನಗೌಡ ಪಾಟೀಲ, ವಸಂತರಾವ ಕುಲಕರ್ಣಿ, ನಾರಾಯಣ ಅದ್ಯಾಪಕ, ರಮೇಶ ಕಣಬೂರ ಅನೇಕರು ಉಪಸ್ಥಿತರಿದ್ದರು ಆನಂದ ದೂಪದಾಳ ಸ್ವಾಗತಿಸಿದರು. ಅಕ್ಷತಾ ಬಿರಾದಾರ ನಿರೂಪಿಸಿದರು.
ನಂತರ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಾನಪದ ನೃತ್ಯ, ನಾಟಕ ಮತ್ತು ದೇಶಭಕ್ತಿ ಗೀತೆಗಳು ಪ್ರೇಕ್ಷಕರ ಮನಸೂರೆಗೊಂಡವು. ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 