ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆ
Election of office bearers of Dalit Sangharsh Samiti
ಜಮಖಂಡಿ 06: ನಗರದ ರಮಾ ನಿವಾಸ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಾಗವಾರ ಬಣದ ಜಮಖಂಡಿ ತಾಲೂಕ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶಾಮರಾವ ಘಾಟಗೆ ಮಾತನಾಡಿ, ರಾಜ್ಯದಲ್ಲಿ ಮತ್ತು ದೇಶದಲ್ಲಿ ಜಾತೀಯ ತಾರತಮ್ಯ ಹಾಗೂ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಹುಬ್ಬಳ್ಳಿ ಇನಾಂ ವೀರಾಪುರ್ ಗ್ರಾಮದ ಮರ್ಯಾದೆ ಹತ್ಯೆಯೇ ಇದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದರು.
ಜಿಲ್ಲಾ ಸಂಚಾಲಕ ಮುತ್ತಣ್ಣ ಮೇತ್ರಿ ಮಾತನಾಡಿ, ಜಿಲ್ಲೆಯಲ್ಲಿ ಸಂಘಟನೆಯನ್ನು ಅಲ್ಪಸಂಖ್ಯಾತರು ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟ ವರ್ಗದವರನ್ನು ಸೇರಿಸಿಕೊಂಡು ಸಂಘಟನೆಯನ್ನು ಬಲಿಷ್ಠ ಗೊಳಿಸುವದಾಗಿ ಎಂದರು.
ತಾಲೂಕ ಹಿಂದುಳಿದ ವರ್ಗದ ಸಂಚಾಲಕರಾಗಿ ನಾಗಪ್ಪ ಹೆಗಡೆ, ಪರಿಶಿಷ್ಟ ವರ್ಗದ ಸಂಚಾಲಕ ಪರಶುರಾಮ ನಾಟಿಕಾರ, ಸಂಚಾಲಕ ಪರಶುರಾಮ ಮಾಂಗ, ಅಲ್ಪಸಂಖ್ಯಾತರ ಘಟಕದ ಸಂಚಾಲಕ ನದೀಮ್ ಗೋಟೆವರ ಅವರನ್ನು ಆಯ್ಕೆ ಮಾಡಿದರು.
ಸಂಘಟನಾ ಸಂಚಾಲಕ ಸದಾಶಿವ ಕಾಂಬಳೆ, ಅನಿಲ ಭಜಂತ್ರಿ, ಸುನೀಲ ಘಾಟಗೆ, ಪುಂಡಲಿಕ ಮಾದರ, ರಮೇಶ ಪೂಜಾರಿ, ಖಜಾಂಚಿ ಬರಮಣ್ಣ ದಡ್ಡಿಮನಿ, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಜು ಮೇತ್ರಿ, ಯಮನಪ್ಪ ಲಿಂಗನೂರು, ಬಸು ಬುದ್ನಿ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಲಕ್ಷ್ಮಣ ಹರಿಜನ, ಚಂದ್ರು ಹರಿಜನ, ಅರುಣ ಲಗಳಿ, ಮುಬಾರಕ ಗೋಟ,ೆ ರಾಜು ಲೋಕಂಡೆ, ಸುನೀಲ ಘಾಟಗೆ ಇದ್ದರು,
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 