ಮಕ್ಕಳನ್ನು ಪ್ರೋತ್ಸಾಹಿಸುವುದು ಅತ್ಯಗತ್ಯ: ಮಮದಾಪುರ
Encouraging children is essential: Mamadapura
ವಿಜಯಪುರ 01: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ, ವಿದ್ಯಾವರ್ಧಕ ಸಂಘದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕ ಪಾರಿತೋಷಕ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಿ. ಎನ್. ದರಬಾರ ಬಾಲಕಿಯರ ಮಾಧ್ಯಮಿಕ ಶಾಲೆಯ ಮುಖ್ಯೋಧ್ಯಾಪಕಿಯಾದ ಸುಜಾತಾ ಮಮದಾಪುರ ಅವರು ಮಾತನಾಡಿ ಮಕ್ಕಳಿಗೆ ಆಟ, ಪಾಠ, ಮನೋರಂಜನೆಯ ಜೊತೆಗೆ ಮಕ್ಕಳಿಗೆ ಪ್ರಶಸ್ತಿ ನೀಡುವುದು, ಅವರನ್ನು ಪ್ರೋತ್ಸಾಹಿಸುವುದು ತುಂಬಾ ಅತ್ಯಗತ್ಯವಾದುದು ಎಂದು ಹೇಳಿದರು.
’ಶಿಸ್ತು ಮೊದಲು, ಆಮೇಲೆ ಓದು’ ಎಂಬ ಧ್ಯೇಯ ವಾಕ್ಯವನ್ನು ಮಕ್ಕಳು ತಮ್ಮ ಬಾಲ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ತುಂಬಾ ಅಗತ್ಯವೆಂದು ಹೇಳಿದರು. ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷತೆಯನ್ನು ಮುಖ್ಯೋಧ್ಯಾಪಕಿ ರೂಪಾಲಿ ತೋಳ ವಹಿಸಿಕೊಂಡಿದ್ದರು ಹಾಗೂ ಶಾಲೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 