ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ 20 ಜನ ಸಜೀವ ದಹನ
Explosion at fireworks factory: At least 20 people burnt alive
ಕಾಕಿನಾಡ : ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಶನಿವಾರ ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭ"ಸಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ.
ಈ ಭೀಕರ ಸ್ಫೋಟದಲ್ಲಿ ಹಲವಾರು ಜನ ಗಾಯಗೊಂಡಿದ್ದು, ಬೆಂಕಿ ಹತ್ತಿರದ ಹಳ್ಳಿಗಳಿಗೂ ವ್ಯಾಪಿಸುವ ಭೀತಿ ಹುಟ್ಟಿಸಿತ್ತು. ಇಂದು "ಭೂಕಂಪದಂತಹ" ಸ್ಫೋಟ ಎಂದು ಬಣ್ಣಿಸಿದ ಸ್ಥಳೀಯರು, ಸ್ಫೋಟದ ನಂತರ ದಟ್ಟವಾದ ಹೊಗೆ ಕಾಣಿಸಿಕೊಂಡಿತು ಮತ್ತು ಘಟಕದೊಳಗೆ ಸಂಗ್ರ"ಸಲಾದ ಪಟಾಕಿಗಳು ಮಧ್ಯಂತರವಾಗಿ ಸ್ಫೋಟಗೊಳ್ಳುತ್ತಲೇ ಇದ್ದುದರಿಂದ ಮತ್ತಷ್ಟು ಭಯ ಹೆಚ್ಚಿಸಿತು ಎಂದು ಹೇಳಿದ್ದಾರೆ.
ಗಾಯಾಳುಗಳನ್ನು ಕಾಕಿನಾಡದ ಸರ್ಕಾರಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಸಂಭ"ಸಿದ ಸ್ಫೋಟದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಶವಗಳು ಹತ್ತಿರದ ಭತ್ತದ ಗದ್ದೆಗಳಿಗೆ ಎಸೆಯಲ್ಪಟ್ಟಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೇಕಡಾ 90ರಿಂದ 100ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಏಳು ರೋಗಿಗಳನ್ನು ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಕಿನಾಡ ಸರ್ಕಾರಿ ಜನರಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಹೇಳಿದ್ದಾರೆ.
ಹಚ್ಚ ಹಸಿರಿನ ಭತ್ತದ ಗದ್ದೆಗಳ ನಡುವೆ ಸ್ಫೋಟದ ಭಯಾನಕ ದೃಶ್ಯ ಕಂಡುಬಂದಿದ್ದು, ಸ್ಥಳೀಯರು ರಸಗೊಬ್ಬರ ಚೀಲಗಳಿಂದ ಮಾಡಿದ ತಾಡಪಾಲದಿಂದ ಶವಗಳನ್ನು ಸ್ಥಳಾಂತರಿಸುತ್ತಿರುವುದು ಕಂಡುಬಂದಿದೆ. ಇನ್ನು ಹತ್ತಿರದ ಗದ್ದೆಗಳಿಗೆ ಎಸೆಯಲ್ಪಟ್ಟ ದೇಹದ ಭಾಗಗಳನ್ನು ಪತ್ತೆಹಚ್ಚಲು ಪೊಲೀಸರು ಡ್ರೋನ್ಗಳನ್ನು ನಿಯೋಜಿಸಿದ್ದಾರೆ.
"ಜಯನಗರ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು, "ರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಸ್ಫೋಟದ ಕಾರಣ ಮತ್ತು ಪರಿಹಾರ ಕ್ರಮಗಳ ಕುರಿತು "ವರಗಳನ್ನು, ಪಡೆದರು. ಅಲ್ಲದೆ ಸಚಿವರು ಮತ್ತು ಉನ್ನತ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
"ಕಾಕಿನಾಡ ಜಿಲ್ಲೆಯ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 