ನಾನಾ ಬೇಡಿಕೆ ಈಡೇರಿಕೆಗೆ ರೈತ ಸಂಘ ಒತ್ತಾಯ
Farmers' association demands fulfillment of various demands
ಹೂವಿನಹಡಗಲಿ 9 - ರೈತರ ನಾನಾ ಸಮಸ್ಯೆಗಳನ್ನುಬಗೆಹರಿಸುವಂತೆ, ಕರ್ನಾಟಕ ರಾಜ್ಯ ರೈತ ಸಂಘ ಮಂಗಳವಾರ ಸಂಸದ ತುಕಾರಾಂ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿತು. ತಾಲ್ಲೂಕಿನ ಕೊಯಿಲಾರಗಟ್ಟಿ ಕೃಷಿ ಸಂಶೋಧನೆ ಕೇಂದ್ರ, ರಸ ಗೊಬ್ಬರ, ಗದಗ- ್ಷಹರಪನಹಳ್ಳಿ ರೈಲ್ವೆ ಮಾರ್ಗ , ಪೊಲೀಸ್ ತರಬೇತಿ ಕೇಂದ್ರ, ಭೂ ಪರಿಹಾರ ಮತ್ತು ಅಂಚೆ ಕಚೇರಿ ಕಟ್ಟಡ ನಿರ್ಮಾಣ , ರೈತರ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಮನವಿಯನ್ನು ನೀಡಿದರು. ಇದೇ ವೇಳೆ ಶಾಸಕ ಕೃಷ್ಣನಾಯಕ, ಗೌರವಾದ್ಯಕ್ಷ ಮಡ್ಡಿ ಪಕ್ಕೀರ್ಪ, ಉಪಾಧ್ಯಕ್ಷ ವಿಠಲ ನಾಯ್ಡ, ವಿ.ಬಿ.ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಶಿವರಾಜ, ದುರುಗಪ್ಪ ಹೆಚ್. ಗನ್ನಿಸಾಬ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 