ಶೇಂಗಾ ಬೆಳೆಗೆ ರೋಗ ಆತಂಕದಲ್ಲಿ ರೈತರು
Farmers worried about disease in groundnut crop
ಲಕ್ಷ್ಮೇಶ್ವರ 21: ತಾಲೂಕಿನಲ್ಲಿ ಶೇಂಗಾ ಬೆಳೆಗೆ ರೋಗ ಆವರಿಸಿದ್ದು ರೈತರು ಆತಂಕ ಪಡುವಂತಾಗಿದೆ ಈಗಾಗಲೇ ರಾಜ್ಯದಲ್ಲಿ ಬರಗಾಲ ಚಾಯ್ ಆವರಿಸಿದ್ದು ಬರುವ ಅಲ್ಪ ಸ್ವಲ್ಪ ಬೆಳೆಯಲ್ಲಿ ಸಮಾಧಾನ ಪಟ್ಟುಕೊಳ್ಳುತ್ತಿದ್ದ ರೈತರಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ ಪ್ರಥಮದಲ್ಲಿ ಉತ್ತಮವಾಗಿ ಬೆಳೆದ ಶೇಂಗಾ ಬೆಳೆಗೆ ಹುಳ್ಳೆ ಪುಚ್ಚಿ ರೋಗಸೇರಿದಂತೆ ಹಲವಾರು ಬಗೆಯ ರೋಗ ಕಾಣಿಸಿಕೊಂಡಿದ್ದು ರೈತರನ್ನು ಮತ್ತಿಷ್ಟು ಆತಂಕಕ್ಕೆ ದುಡಿದೆ ಅದರಂತೆ ತಾಲೂಕಿನ ಗೊಜನೂರು ಗ್ರಾಮದ ರೈತ ಚನ್ನಪ್ಪ ಷಣ್ಮುಖಿ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದ ಶೇಂಗಾ ಬೆಳೆಗೆ ರೋಗ ಕಾಣಿಸಿಕೊಂಡಿದ್ದು ಅವರು ಸಹ ಆತಂಕ ಪಡುವಂತಾಗಿದೆ ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಕೃಷಿ ಇಲಾಖೆ ಅಧಿಕಾರಿಗಳು ಶೇಂಗಾ ಬೆಳೆಗೆ ರೋಗ ಕಾಣಿಸಿಕೊಂಡ ರೈತರ ಜಮೀನುಗಳಿಗೆ ತೆರಳಿ ರೋಗ ಹತೋಟಿಯ ಬಗ್ಗೆ ರೈತರಿಗೆ ಸಮರ್ಕವಾಗಿ ಮಾಹಿತಿಯನ್ನು ಒದಗಿಸುವಂತಹ ಕೆಲಸ ಮಾಡಬೇಕು ಇದರಿಂದ ರೈತರಿಗೆ ಅನುಕೂಲವಾಗುತ್ತದೆಅದಕ್ಕಾಗಿ ಕೃಷಿ ಇಲಾಖೆ ಅಧಿಕಾರಿಗಳು ಆದಷ್ಟು ಬೇಗನೆ ಎಲ್ಲ ರೈತರ ಜಮೀನುಗಳಿಗೆ ಭೇಟಿ ನೀಡಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 