ಸಮಿತಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸಿನ ಅರಿವು ಕಾರ್ಯಕ್ರಮ
Financial awareness program for students at Samiti College
ಸಮಿತಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸಿನ ಅರಿವು ಕಾರ್ಯಕ್ರಮ
ಕಾಗವಾಡ, 02 ; ಬೆಳಗಾವಿ ನಗರದ ಎಸ್ಎಸ್ಎಸ್. ಸಮಿತಿಯ ಮಹಾವೀರ ಪಿ. ಮಿರ್ಜಿ ವಾಣಿಜ್ಯ ಮಹಾವಿದ್ಯಾಲಯ, ಬಿಬಿಎ ಮಹಾವಿದ್ಯಾಲಯ, ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಆರ್ಸಿಯು ಬೆಳಗಾವಿ ಮತ್ತು ಮೆಂಟರ್ಸ್ ಫಾರ್ ಕಿಡ್ಸ್ ಬೆಂಗಳೂರು ಇವುಗಳ ಸಹಯೋಗದಲ್ಲಿ ‘ಹಣಕಾಸಿನ ಅರಿವು-ವಾಣಿಜ್ಯ ವಿದ್ಯಾರ್ಥಿಗಳ ಭವಿಷ್ಯದ ಸಂಪತ್ತು’ ಎಂಬ ವಿಷಯದ ಮೇಲೆ ಉಪನ್ಯಾಸ ನಡೆಯಿತು.
ಮುಖ್ಯ ಅತಿಥಿಗಳಾಗಿ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ನಿರ್ದೇಶಕ ಪ್ರೊ. ಬಿ.ಎಸ್. ನಾವ್ಹಿ, ಉಪನ್ಯಾಸಕರಾಗಿ ಬೆಂಗಳೂರಿನ ಮೆಂಟಲ್ ಫಾರ್ ಕಿಡ್ಸ್ನ ಸಂಯೋಜಕಿ ಡಾ. ಪೂರ್ಣಿಮಾ ಜೋಗಿ, ಲೀಡ್ ಇನ್ಸ್ಟಿಟ್ಯೂಷನಲ್ ಪಾರ್ಟ್ನರ್ಶಿಪ್ನ ಅಪರ್ಣ ಭಟ್ ಮಾತನಾಡಿ, ವಾಣಿಜ್ಯ ಕ್ಷೇತ್ರದಲ್ಲಿ ಯುವಕರು ಹೊಂದಬೇಕಾದ ಪ್ರಾಯೋಗಿಕ ಅರಿವು, ಹಣಕಾಸು ನಿರ್ವಹನೆಯ ಪ್ರಾಮುಖ್ಯತೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.
ಈ ವೇಳೆ ಪ್ರಾಚಾರ್ಯ ರವಿ ದಂಡಗಿ, ಉಪಪ್ರಾಂಶುಪಾಲ ಡಾ. ಭರತ ಅಲಸಂದಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ನಿರ್ಮಲಾ ಗಡಾದ, ಬಿಬಿಎ ಕಾಲೇಜಿನ ಪ್ರಾಚಾರ್ಯ ಶ್ವೇತಾ ಪೆಟ್ರೋಟಿ, ಆರ್ಸಿಯುನ ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋತೆ, ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಸಹಾಯಕ ಯಲ್ಲಪ್ಪ ಮೂಡಲಗಿ ಮತ್ತು ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ನಾಗವೇಣಿ ಧರೆನ್ನವರ ಸ್ವಾಗತಿಸಿದರು. ಪೂನಮ ಪಾಟೀಲ ಪರಿಚಯಿಸಿದರು. ಲಕ್ಷ್ಮೀ ಚೌಧರಿ ನಿರೂಪಿಸಿದರು. ಬಿ.ಎಸ್. ಪಾಟೀಲ ವಂದಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 