ಆರ್ಯುವೇದಿಕ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಳ್ಳಿರಿ : ಡಾ. ಮಿಲಿಂದ
Find relief through Ayurvedic treatment: Dr. Milind
ಆರ್ಯುವೇದಿಕ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಳ್ಳಿರಿ : ಡಾ. ಮಿಲಿಂದ
ಶಿಗ್ಗಾವಿ 01: ದೈನಂದಿನ ಜೀವನದಲ್ಲಿ ನಮಗೆ ಅನೇಕ ಆರೋಗ್ಯ ಸಮಸ್ಯೆಗಳಿರುತ್ತವೆ ಅವುಗಳಿಗೆ ನಾವು ಆರ್ಯುವೇದಿಕ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ನಿತ್ಯ ನೂತನ ಆರ್ಯುವೇದ ಸಂಶೋಧನಾ ಸಂಸ್ಥೆ ಡಾ. ಮಿಲಿಂದ ಹುಕ್ಕೇರಿ ಹೇಳಿದರು.
ತಾಲೂಕಿನ ಗಂಜೀಗಟ್ಟಿ ಗ್ರಾಮದ ಚರಮೂರ್ತೇಶ್ವರ ನಿತ್ಯ ನೂತನ ಸಭಾ ಭವನದಲ್ಲಿ ನಡೆದ ಆರ್ಯುವೇದಿಕ ತಪಾಸಣಾ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಆರ್ಯುವೇದಾ ಚಿಕಿತ್ಸೆಗೆ ಎಲ್ಲಿಲ್ಲದ ಬೇಡಿಕೆ ಇದ್ದು ಇದರ ಸದುಪಯೋಗವನ್ನು ರೋಗಿಗಳು ಪಡೆದುಕೊಳ್ಳಬೇಕು ಮತ್ತು ಕಡಿಮೆ ಬೆಲೆಯಲ್ಲಿ ಉತ್ತಮವಾದ ಚಿಕಿತ್ಸೆಯನ್ನು ಪಡೆದು ನಿಮ್ಮ ಆರೋಗ್ಯವನ್ನು ನಿಮ್ಮ ಹತೋಟಿಯಲ್ಲಿಡಬಹುದು ಎಂದರು.
ಸಾನಿಧ್ಯವಹಿಸಿ ಡಾ. ವೈಜನಾಥ ಶಿವಲಿಂಗೇಶ್ವರ ಶ್ರೀಗಳು ಮಾತನಾಡಿ ತಾಲೂಕಿನ ಸಮಸ್ತ ರೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಿರಿ ಏಕೆಂದರೆ ನನಗೂ ಸಹಿತ ಶಸ್ತ್ರಚಿಕಿತ್ಸೆ ಆದರೂ ಸಹಿತ ನೋವು ಕಡಿಮೆ ಆಗಿರಲಿಲ್ಲ ನಂತರ ಇವರ ಚಿಕಿತ್ಸೆ ಪಡೆದ ನಂತರ ಆರಾಮವಾಗಿದ್ದೇನೆ ಎಂದರು.
ಡಾ. ಮಂಜುನಾಥ ಹಾಗೂ ನಿತ್ಯ ನೂತನ ಆರ್ಯುವೇದ ಸಂಶೋಧನಾ ಸಂಸ್ಥೆಯ ಸಿಬ್ಬಂದಿಗಳು, ರೋಗಿಗಳು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 