ಬಳ್ಳಾರಿಯಲ್ಲಿ ಕೊರೊನಾಗೆ ಇಂದು ಮತ್ತೆ ಐದು ಮಂದಿ ಬಲಿ: ವೈರಲ್ ವಿಡಿಯೋ ತನಿಖೆಗೆ ಡಿಸಿ ಆದೇಶ
ಬಳ್ಳಾರಿ ಜೂ 30: ಜಿಲ್ಲೆಯಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ಸೋಂಕಿಗೆ ಐದು ಮಂದಿ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.
ಬಳ್ಳಾರಿ ತಾಲೂಕಿನ ಕೋಳೂರು ಗ್ರಾಮದ 31 ವರ್ಷದ ಮಹಿಳೆ, ಹೊಸಪೇಟೆ ನಗರದ ಎನ್ಸಿ ಕಾಲೋನಿಯ 63 ವರ್ಷದ ಪುರುಷ, ಬಳ್ಳಾರಿ ಸಾಲಾಗೊಂಡ ಪ್ರದೇಶದ 55 ವರ್ಷದ ಮಹಿಳೆ, ಸಂಡೂರು ನಗರದ ಕೆಹೆಚ್ಬಿ ಕಾಲೊನಿಯ 58 ವರ್ಷದ ಮಹಿಳೆ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.
ತೀವ್ರ ಉಸಿರಾಟದ ತೊಂದರೆ, ಜ್ವರ, ಕೆಮ್ಮು ಮತ್ತು ನೆಗಡಿಯಿಂದ ಬಳಲುತ್ತಿದ್ದ ಈ ಐದು ಮಂದಿಯನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬಂದ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಎಸ್ಒಪಿ ಪ್ರಕಾರ ಮೃತದೇಹಗಳ ಅಂತ್ಯಕ್ರಿಯೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವೈರಲ್ ವಿಡಿಯೋ ಬಗ್ಗೆ ತನಿಖೆಗೆ ಡಿಸಿ ಆದೇಶ:
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಜಿಲ್ಲೆಯದ್ದು ಎನ್ನಲಾಗಿರುವ ಕೊರೊನಾ ಸೋಂಕಿತರ ಶವ ಸಂಸ್ಕಾರ ವಿಡಿಯೋ ಬಗ್ಗೆ ತನಿಖೆಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿನ್ನೆ ಒಂದೇ ದಿನ 9 ಮಂದಿ ಕೊರೊನಾದಿಂದ ಮೃತಪಟ್ಟಿದ್ದರು. ಇವರ ಶವ ಸಂಸ್ಕಾರದ ವೇಳೆ ಆರೋಗ್ಯ ಸಿಬ್ಬಂದಿ ಮೃತದೇಹಗಳನ್ನು ಕನಿಷ್ಠ ಗೌರವ ಇಲ್ಲದೆ ಗುಂಡಿಗೆ ಎಸೆಯುತ್ತಿರುವ ವಿಡಿಯೋ ವೈರಲ್ ಆಗಿತ್ತು. ಹೀಗಾಗಿ ಈ ಬಗ್ಗೆ ತನಿಖೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 