4 ಅಡಿ ಉದ್ದದ ಮೊಸಳೆ ಹಿಡಿದು ನದಿಗೆ ಬಿಟ್ಟ ಅರಣ್ಯ ಇಲಾಖೆ ಸಿಬ್ಬಂದಿ
Forest Department personnel captured a 4-foot-long crocodile and released it into the river
ಲೋಕದರ್ಶನ ವರದಿ
ದಾಂಡೇಲಿ 24: ದಾಂಡೇಲಿಯಲ್ಲಿ ಸುರಿದ ಮಳೆಯ ರಭಸಕ್ಕೆ ಕಾಳಿನದಿಯಲ್ಲಿದ್ದ ಮೊಸಳೆಯೊಂದು ಪಟೇಲ ನಗರದ ಗಲ್ಲಿ ಗಲ್ಲಿಯ ರಸ್ತೆಗಳಲ್ಲಿ ತಿರುಗಾಡತೊಡಗಿತು. ರಾತ್ರಿಯ ವೇಳೆ ಕಾಣಿಸಿಕೊಂಡ ಈ ಮೊಸಳೆಯಿಂದಾಗಿ ಸ್ಥಳೀಯರು ಆತಂಕಗೊಂಡು ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದರು. 4 ಅಡಿ ಉದ್ದದ ಮೊಸಳೆ ಮರಿಯನ್ನು ಉರಗತಜ್ಞ ರಜಾಕ್ ಶಾ ಅರಣ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಆಗಮಿಸಿ ಸುರಕ್ಷಿತವಾಗಿ ಹಿಡಿದು ನದಿಗೆ ಬಿಟ್ಟರು. ಸ್ಥಳೀಯ ಜನರು ನಿಟ್ಟುಸಿರು ಬಿಡುವಂತಾಯಿತು. ಮೇಲಿಂದ ಮೇಲೆ ಈ ಭಾಗದಲ್ಲಿ ಮೊಸಳೆಗಳು ಕಾಣಿಸಿಕೊಳ್ಳುತ್ತಿದ್ದು, ಜನರ ಸುರಕ್ಷತೆಗಾಗಿ ನದಿಯ ದಡದಲ್ಲಿ ರಕ್ಷಣಾ ಬೇಲಿಯನ್ನು ಇಲಾಖೆಯಿಂದ ನಿರ್ಮಿಸಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದರು.
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 