ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ
Kumaraswamy
ಬೆಂಗಳೂರು, ಡಿ 4-ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯವುಂಟಾಗಿದೆ.
ಹವಾಮಾನ ವೈಪರೀತ್ಯದಿಂದ ಹಾಗೂ ಚುನಾವಣಾ ಪ್ರಚಾರಗಳಲ್ಲಿ ಸತತ ತೊಡಗಿಸಿಕೊಂಡಿದ್ದರಿಂದ ಜ್ವರ, ನೆಗಡಿ ಕೆಮ್ಮು ಉಂಟಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಚಿಕ್ಕಬಳ್ಳಾಪುರ ಪ್ರಚಾರದಲ್ಲಿ ಭಾಗಿಯಾಗಿದ್ದಾಗಲೇ ಗಂಟಲು ಕೆರೆತ ಹಾಗೂ ಶೀತವುಂಟಾಗಿತ್ತು. ವಿಶ್ರಾಂತಿರಹಿತ ಸುತ್ತಾಟ, ಭಾಷಣದಿಂದ ಜ್ವರ ಹೆಚ್ಚಾಗಿದ್ದು, ಜಯದೇವ ಆಸ್ಪತ್ರೆಯಲ್ಲಿ ವೈದ್ಯರಿಂದ ಬುಧವಾರ ತಪಾಸಣೆಗೊಳಗಾದರು. ಸುಮಾರು ಅರ್ಧಗಂಟೆ ಕುಮಾರಸ್ವಾಮಿ ಅವರನ್ನು ಪರಿಶೀಲಿಸಿದ ವೈದ್ಯರು ನಾಲ್ಕು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ಅವರು ತಮ್ಮ ಜೆ.ಪಿ ನಗರದ ನಿವಾಸಕ್ಕೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 