ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನ: ವೃದ್ಧಾಶ್ರಮದಲ್ಲಿ ಅನ್ನದಾನ
Former students pay tribute to teachers: Food distribution at old age home
ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನ: ವೃದ್ಧಾಶ್ರಮದಲ್ಲಿ ಅನ್ನದಾನ
ಬಳ್ಳಾರಿ 15: ನಗರದ ವಾರ್ಡ್ಲಾ ಪದವಿ ಪೂರ್ವ ಕಾಲೇಜಿನ 1994 ಬ್ಯಾಚ್ ವಾಣಿಜ್ಯ ವಿಭಾಗದ ಹಳೇ ವಿದ್ಯಾರ್ಥಿಗಳ ಪುನರ್ ಸಂಘಟಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ತಮ್ಮ ಹಳೆಯ ನೆನಪುಗಳನ್ನು ಮೆಲಕು ಹಾಕಲಾಯಿತು. ತಮಗೆ ವಿದ್ಯಾ ಬುದ್ಧಿಗಳನ್ನು ಕಲಿಸಿದ ಗುರುಗಳನ್ನು ಸನ್ಮಾನಿಸಲಾಯಿತು. ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ನಿರಾಶ್ರಿತರಿಗೆ ಬೆಡ್ಶೀಟ್ಗಳನ್ನು ವಿತರಿಸಲಾಯಿತು. ವೃದ್ಧಾಶ್ರಮದಲ್ಲಿ ಅನ್ನದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಅಂದಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಜಶೇಖರ್ ಮಾತನಾಡುತ್ತಾ, ವಿದ್ಯಾರ್ಥಿಗಳ ಏಳಿಗೆಗೆ ಇದೇ ನಿಜವಾದ ಗುರವಂದನಾ ಕಾರ್ಯಕ್ರಮ ಎಂದು ಅಭಿನಂದಿಸಿದರು. ವಿಕ್ಟರ್, ದ್ವಾರಕಬಾಯಿ, ಪ್ರಹ್ಲಾದ ಚೌಧರಿ ಉಪನ್ಯಾಸಕರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಬಿ.ಪಿ.ಸತೀಶ್, ಬಿಲ್ವರಾಜೇಶ್, ಸುಕುಮಾರ್, ಕವಿತ, ಗೌರಿ, ನಾಗರಾಜ್, ಗೀತ, ಸಂತೋಷ್, ಶೋಭಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 