ಟ್ರ್ಯಾಕ್ಟರ್ಗೆ ಹಿಂಬದಿ ಕಾರು ಡಿಕ್ಕಿ: ನಾಲ್ವರು ಯುವಕರ ದಾರುಣ ಸಾವು
Four youths die in horrific car-tractor collision
ಜಮಖಂಡಿ 03: ತಾಲೂಕಿನ ಸಿದ್ದಾಪೂರ ಗ್ರಾಮದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಹೋಗುತ್ತಿರುವ ಕಬ್ಬಿನ ಟ್ರ್ಯಾಕ್ಟರ್ಗೆ ಹಿಂಬದಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನ ಯುವಕರು ತಡರಾತ್ರಿ ಸಾವನಪ್ಪಿದ ಧಾರುಣ ಘಟನೆ ಸಂಭವಿಸಿದೆ. ತಾಲೂಕಿನ ಸಿದ್ದಾಪೂರ ಗ್ರಾಮದ ನಾಲ್ಕು ಜನ ಯುವಕರಾದ ವಿಶ್ವನಾಥ ಕುಂಬಾರ(17), ಪ್ರವೀಣ ಶೇಡಬಾಳ(22), ಗಣೇಶ ಅಳ್ಳಿಮಟ್ಟಿ( 20),
ಪ್ರಜ್ವಲ್ ಶೇಡಬಾಳ(17) ಸಾವನಪ್ಪಿದ ದುರ್ದೈವಿಗಳು.
ಸಿದ್ದಾಪೂರ ಗ್ರಾಮದಿಂದ ನಾಲ್ಕು ಜನ ಸ್ನೇಹಿತರು ಸೇರಿಕೊಂಡು ತಡರಾತ್ರಿ ಶಿರೋಳ ಗ್ರಾಮದ ಕಾಡಸಿದ್ದೇಶ್ವರ ದೇವರ ಜಾತ್ರೆಗೆ ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೋಲಿಸ್ರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ನಾಲ್ಕು ಜನ ಯುವಕರ ಶವಗಳನ್ನು ಜಮಖಂಡಿ ಸರಕಾರಿ ಉಪವಿಭಾಗದ ಆಸ್ಪತ್ರೆಗೆ ಶವ ಪರೀಕ್ಷೆಗೆ ರವಾನಿಸಲಾಗಿದೆ. ಸರಕಾರಿ ಉಪವಿಭಾಗ ಆಸ್ಪತ್ರೆಗೆ ಜಿಲ್ಲಾ ಎಸ್ ಪಿ. ಸಿದ್ಧಾರ್ಥ ಗೋಯಲ್ ಅವರು ಭೇಟಿ ನೀಡಿ. ತನಿಖೆಯನ್ನು ಮುಂದುವರಿಸಿದ್ದಾರೆ. ಮಾಜಿ ಶಾಸಕ ಆನಂದ ನ್ಯಾಮಗೌಡ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಸಿದ್ದಾಪೂರದಲ್ಲಿ ನಾಲ್ಕು ಜನ ಯುವಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಡೀ ಗ್ರಾಮವೇ ನಿರವ ಮೌನ ಆವರಿಸಿದೆ. ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟುವಂತೆ ಇತ್ತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 