ಉಚಿತ ಆರೋಗ್ಯ ತಪಾಷಣೆ ಶಿಬಿರ
Free health check-up camp
ಉಚಿತ ಆರೋಗ್ಯ ತಪಾಷಣೆ ಶಿಬಿರ
ಕೊಪ್ಪಳ-21 ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ಮಂಗಳೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಅಗಸ್ತ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ ಕೊಪ್ಪಳ ವಿಶ್ವ ಹಿಂದೂ ಪರಿಷತ್ ಕೊಪ್ಪಳ ಜಿಲ್ಲೆ ಏಕಲ್ ವಿದ್ಯಾಲಯ ಮತ್ತು ಗ್ರಾಮ ಪಂಚಾಯತ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾಡಲಾಯಿತು. ನಂತರ ಡಾ. ಲೋಕೇಶ ಮಾತನಾಡಿ ಅಗಸ್ತ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ನುರಿತ ವೈದ್ಯರಿಂದ ಹಾಗೂ ವಿದ್ಯಾರ್ಥಿಗಳಿಂದ ಮಂಗಳೂರು ಗ್ರಾಮದ ಜನರಿಗೆ ಉಚಿತವಾಗಿ ಕಣ್ಣಿನ ಚಿಕಿತ್ಸೆ, ಮೊಣಕಾಲು ನೋವಿನ ಚಿಕಿತ್ಸೆಯನ್ನು ನಮ್ಮ ವೈದ್ಯರು ತಪಾಸಣೆ ಮಾಡಿ ಸರಿಯಾದ ಚಿಕಿತ್ಸೆ ನೀಡಿದರು. ಕಣ್ಣಿನ ಪೊರೆ ಹಾಗೂ ಅನ್ಯ ಶಸ್ತ್ರ ಚಿಕಿತ್ಸೆಗಳಿಗೆ ಯಶಸ್ವಿನಿ ಕಾರ್ಡ್ ಸೌಲಭ್ಯವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ. ಸುಧಾಕರ, ಡಾ. ಸಂಗಮೇಶ್ ಹಿರೇಮಠ,ಡಾ. ಎಮ್ ಆರ್ ಕುಲಕರ್ಣಿ,ಡಾ. ಪಾರ್ವತಿ, ಡಾ. ಸೃಜನ, ಡಾ. ಪ್ರಜ್ವಲಾ, ಸೌಂದರ್ಯ ಹೆಚ್ಆರ್, ವಿದ್ಯಾರ್ಥಿಗಳು, ಸಿಬ್ಬಂದಿಯವರು, ಗ್ರಾಮಸ್ಥರು ಹಾಜರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 