ಇಂದು, ನಾಳೆ ಉಚಿತ ಆರೋಗ್ಯ ತಪಾಸಣೆ ಶಿಬಿರ
Free health check-up camp today, tomorrow
ಮಹಾಲಿಂಗಪುರ 08: ಪಟ್ಟಣದ ಪುರಸಭೆ ಮಾಜಿ ಉಪಾಧ್ಯಕ್ಷ ಚನಬಸು ಹುರಕಡ್ಲಿ ಅವರ ತಂದೆ, ತಾಯಿಯ ಸ್ಮರಣಾರ್ಥವಾಗಿ ಸಿ.ಎಂ ಹುರಕಡ್ಲಿ ಫೌಂಡೇಶನ್ ವತಿಯಿಂದ ಕಳೆದ 17 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದು, ನ.9, 10ರಂದು ಸ್ಥಳೀಯ ಶ್ರೀ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದಲ್ಲಿ ಅಂಗವಿಕಲರಿಗೆ ಕೃತಕ ಕೈ-ಕಾಲು ಜೋಡಣೆ, ಕ್ಯಾಲಿಪರ್ ಬಗಲು ಬಡಿಗೆ ವಿತರಣೆ, ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ, ಅಗ್ನಿಕರ್ಮ, ವಿದ್ದಕರ್ಮ, ಆಯುರ್ವೇದ ಚಿಕಿತ್ಸೆ, ರಕ್ತದಾನ ಶಿಬಿರ, ದಂತ ಚಿಕಿತ್ಸೆ ಶಿಬಿರ,ಕಲರ್ ಥೆರಪಿ ಮತ್ತು ಆಕ್ಯುಪ್ರೇಶರ್ ಶಿಬಿರ, ಕೈ ಕಾಲು ಬೆನ್ನು ನೋವಿಗೆ ಮಸಾಜ್ ಚಿಕಿತ್ಸೆ ಜೊತೆಗೆ 10 ದಿನದ ಚೈತನ್ಯ ವಿಶೇಷ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದ್ದು, ಎಲ್ಲ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥಾಪಕ ಚನ್ನಬಸು ಹುರಕಡ್ಲಿ ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 