ಉಚಿತ ಮೊಬೈಲ್ ರಿಪೇರಿ ಸೇವಾ ಶಿಬಿರ
Free mobile repair service camp
ರುಡ್ಸೆಟ್ ಸಂಸ್ಥೆ, ಧಾರವಾಡದಲ್ಲಿ ಮೊಬೈಲ್ ರಿಪೇರಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳಿಂದ ಧಾರವಾಡದ ಜೆಎಸ್ಎಸ್ ಕಾಲೇಜು ಆವರಣದಲ್ಲಿ “ಉಚಿತ ಮೊಬೈಲ್ ರಿಪೇರಿ ಸೇವಾ ಶಿಬಿರ ” ವನ್ನು ದಿ. 22ರಂದು ಧಾರವಾಡದ ಜೆ.ಎಸ್.ಎಸ್ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಅಜಿತಪ್ರಸಾದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಶಿಬಿರದ ಉದ್ಘಾಟನೆ ಮಾಡಿದ ಅವರು ಮೊಬೈಲ್ ಕ್ಷೇತ್ರಕ್ಕೆ ತುಂಬಾ ಬೇಡಿಕೆಯಿದ್ದು ಇದರ ಸದುಪಯೋಗ ಮಾಡಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಜೊತೆಗೆ ಈ ಶಿಬಿರವನ್ನು ಆಯೋಜಿಸಿದ ರುಡ್ಸೆಟ್ ಸಂಸ್ಥೆಯ ಕಾರ್ಯವನ್ನು ಅವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಅರಿಹಂತ ಪ್ರಸಾದ್, ಮಹಾವೀರ ಉಪಾಧ್ಯೆ, ಸಂಜಯ್ ಕಪಟ್ಕರ್, ರುಡ್ಸೆಟ್ ಸಂಸ್ಥೆಯ ಸಿಬ್ಬಂದಿಗಳು, ತರಬೇತಿದಾರರು ಭಾಗವಹಿಸಿದ್ದರು. ಈ ಶಿಬಿರದಲ್ಲಿ ನೂರಾರು ಗ್ರಾಹಕರು ತಮ್ಮ ಮೊಬೈಲ್ ಸೆಟ್ಗಳನ್ನು ಉಚಿತವಾಗಿ ರಿಪೇರಿ ಮಾಡಿಸಿದರು. ಈ ಶಿಬಿರವು ಗ್ರಾಹಕರ ಸಂತೃಪ್ತಿಗೆ ಕಾರಣವಾಯಿತು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 