ಜಿ. ಹೆಚ್. ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ
ಹಾವೇರಿ02: ನಗರದ ಕೆ. ಎಲ್. ಇ. ಸಂಸ್ಥೆಯ ಜಿ. ಹೆಚ್. ಕಾಲೇಜಿನಲ್ಲಿ ಈ ರಾಷ್ಟ್ರ ಕಂಡ ಅದ್ಭುತ ಮತ್ತು ಅಸಾಮಾನ್ಯ ಮೇರು ವ್ಯಕ್ತಿತ್ವದ ರಾಜಕಾರಣಿ, ಉಕ್ಕಿನ ಮನುಷ್ಯ ಸದರ್ಾರ ವಲ್ಲಭಬಾಯಿ ಪಟೇಲರ ಜನ್ಮದಿನದ ಅಂಗವಾಗಿ "ರಾಷ್ಟ್ರೀಯ ಏಕತಾ ದಿನಾಚರಣೆ"ಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ. ಎಮ್. ಎಸ್. ಯರಗೊಪ್ಪ ವಹಿಸಿ, ಪಾಲ್ಗೊಂಡಿದ್ದ ನೂರಾರು ವಿದ್ಯಾಥರ್ಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಅನಂತರ ಜರುಗಿದ 'ಆಡಳಿತದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅರಿವು ಸಪ್ತಾಹ-2018' ನ್ನು ಆಚರಿಸಲಾಯಿತು. ಮಾತನಾಡಿದ ಪ್ರಾಚಾರ್ಯ ಡಾ. ಎಮ್. ಎಸ್. ಯರಗೊಪ್ಪ ಇಂದು ಎಲ್ಲೆಡೆ ನಡೆಯುತ್ತಿರುವ ಕೆಲವು ಕ್ಷೇತ್ರಗಳಲ್ಲಿನ ಭ್ರಷ್ಟಾಚಾರವನ್ನು ನಿಯಂತ್ರಿಸಲು ಪ್ರತಿಯೊಬ್ಬ ನಾಗರಿಕನೂ ಬಹು ಜಾಗರೂಕನಾಗಿ ಬದಲಾವಣೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ವಿದ್ಯಾಥರ್ಿಗಳು ನಿಷ್ಠೆ ಮತ್ತು ಪ್ರಾಮಾಣಿಕತೆ ಮೆರೆಯಬೇಕಿದೆ.
ಸಲ್ಲುವ ತೆರದಲ್ಲಿ ಕಾರ್ಯ ಮಾಡುವ ಮತ್ತು ಯೋಚಿಸುವ ಗುಣವಂತಿಕೆಯನ್ನು ಮೆರೆಯಬೇಕಿದೆ. ಹೃದಯವಂತಿಕೆ ಇಲ್ಲದ ಶ್ರೀಮಂತಿಕೆ ವ್ಯರ್ಥ. ಸ್ವಾರ್ಥ ಮತ್ತು ಸಂಕುಚಿತತೆ ಬಿಟ್ಟು ಪ್ರತಿ ಹಂತದ ನಿಯತ್ತಿನ ಕಾರ್ಯಕ್ಕೆ ಬದ್ದತೆಯಿಂದಿರುವ ಕಾರ್ಯ ಮಾಡಬೇಕಿದೆ ಎಂದರು.
ಪ. ಪೂ. ಪ್ರಾಚಾರ್ಯ ಪ್ರೊ. ಜೆ. ಆರ್. ಶಿಂಧೆ, ಎನ್. ಸಿ. ಸಿ., ಎನ್. ಎಸ್. ಎಸ್., ರೆಡ್ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್, ಇಕೋ ಕ್ಲಬ್ ಘಟಕದ ಅಧಿಕಾರಿಗಳು, ಕೆಡೆಟ್ಗಳು, ಬೊಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 