ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ
Gandhi ideology is the greatest of all time
ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ
ಹೂವಿನ ಹಡಗಲಿ 30: ಮಹಾತ್ಮ ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ ಎಂದು ಮುಖ್ಯ ಗುರುಗಳಾದ ಸುರೇಶ ಅಂಗಡಿ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಗುರುವಾರ ಹುತಾತ್ಮರ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ಸಿಂಚನ ಸಲ್ಲಿಸಿ ಅವರು ಮಾತನಾಡಿದರು.
ಅಹಿಂಸೆ ಸತ್ಯ ಶಾಂತಿ ಪ್ರಾಮಾಣಿಕತೆ ಸೌಹಾರ್ದತೆ ಉದಾತ್ತ ಮೌಲ್ಯಗಳನ್ನು ಗಾಂಧೀಜಿ ಪ್ರತಿಪಾದಿಸಿದರು.ಚಿತ್ರಕಲಾ ಶಿಕ್ಷಕರಾದ ದ್ವಾರಕೀಶ್ ರೆಡ್ಡಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಗಾಂಧಿ ನಡೆಸಿದ ಅವಿರತ ಶ್ರಮವನ್ನು ಅರ್ಥಪೂರ್ಣವಾಗಿ ವಿವರಿಸಿದರು.ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ ಬಸಪ್ಪ ಕೆ ಪ್ರತಿಮಾ ಎನ್ ಆನಂದ್ ಜಿ ಗೀತಾ ಪಿ ಎಂ, ಲಂಬಾಣಿ ಗಿಡ್ಡಾನಾಯ್ಕ್, ವೈ ಜಯಮ್ಮ ರೇಖಾ ಎಸ್ ಸಂಗಮೇಶ ಸುಂಕದ ಪ್ರಸಾದ್ ಸಂತೋಷ ಕುಮಾರ್ ಎಸ್ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 