ನೂತನ ತಾಲೂಕುಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿಬೇಕು : ಅಜೀತಕುಮಾರ ದೇಸಾಯಿ
Greater emphasis should be given to the development of new taluks: Ajit Kumar Desai
ಯರಗಟ್ಟಿ 05: ರಾಜ್ಯ ಬಜೆಟ್ನಲ್ಲಿ ತಾಲೂಕು ಮಟ್ಟದ ಅಭಿವೃದ್ಧಿ, ಮೂಲಸೌಕರ್ಯ, ಕೃಷಿ, ಮತ್ತು ನೀರಾವರಿ ಯೋಜನೆಗಳಿಗೆ ಅನುದಾನ ಲಭ್ಯವಾಗುತ್ತಾ? 2026-27ನೇ ಸಾಲಿನ ಬಜೆಟ್ನಲ್ಲಿ ವಿಶೇಷವಾಗಿ ಹೊಸ ತಾಲೂಕುಗಳ ಅಭಿವೃದ್ಧಿ, ನೀರಾವರಿ ಯೋಜನೆಗಳು, ಕೈಗಾರಿಕಾ ವಸಾಹತುಗಳು ಮತ್ತು ಪ್ರವಾಸೋದ್ಯಮದಂತಹ ನಿರ್ದಿಷ್ಟ ವಲಯಗಳಿಗೆ ಬೇಡಿಕೆಗಳು ಮತ್ತು ಯೋಜನೆಗಳನ್ನು ಘೋಷಿಸಲಾಗುತ್ತದೆ. ಬಜೆಟ್ನಲ್ಲಿ ನೂತನ ತಾಲೂಕಿಗೆ ಅನುದಾನ ಬಂದರೆಮೂಲಸೌಕರ್ಯ ಹಾಗೂ ಅಭಿವೃದ್ಧಿ ಸಿಗುವ ಸಾಧ್ಯತೆ ದೊರೆಯುತ್ತದೆ. ಹೊಸ ತಾಲೂಕುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮತ್ತು ಮೂಲಸೌಕರ್ಯಗಳ ನಿರ್ಮಾಣಕ್ಕೆ ಆದ್ಯತೆ ನೀಡುವ ನೀರೀಕ್ಷೆಯಿದೆ. ನೀರಾವರಿ ಯೋಜನೆಗಳು: ತಾಲೂಕಿನಲ್ಲಿ ಸತ್ತಿಗೇರಿ ಏತ ನೀರಾವರಿ ಯೋಜನೆ ನಿಧಾನಗತಿಯಲ್ಲಿ ಸಾಗುತ್ತಿದೆ ಹಾಗೂ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಅಥವಾ ಚೆಕ್ ಡ್ಯಾಮ್ ನಿರ್ಮಾಣದ ಯೋಜನೆಗಳಿಗೆ ಅನುದಾನ ಸಿಗಬಹುದಾ?
ಪ್ರವಾಸೋದ್ಯಮ:ತಾಲೂಕಿನ ವರವಿ ಕೋಳ ಹಾಗೂ ಸೊಗಲ ಸೋಮೇಶ್ವರ, ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿ ಮತ್ತು ವಿಶೇಷ ಯೋಜನೆಗಳಿಗೆ ಬಜೆಟ್ನಲ್ಲಿ ಅವಕಾಶ ಸಿಗುತ್ತಾ? ವಿಶೇಷವಾಗಿ, 16ನೇ ಹಣಕಾಸು ಆಯೋಗದ ವರದಿಯ ಅನ್ವಯ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಳವಾಗಿದ್ದು (4.131ಅ), ಇದು ತಾಲೂಕು ಮಟ್ಟದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆಯನ್ನು ಹೆಚ್ಚಿಸಿದೆ. ಹೇಳಿಕೆ: ನೂತನ ತಾಲೂಕಿನಲ್ಲಿ ವಿವಿಧ ಇಲಾಖೆಗಳು ಪ್ರಾರಂಭಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ನೂತನ ತಾಲೂಕುಗಳಿಗೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿಬೇಕು.ಅಜೀತಕುಮಾರ ದೇಸಾಯಿ, ಮಾಜಿ ಜಿ.ಪಂ. ಸದಸ್ಯರು, ಯರಗಟ್ಟಿಹೇಳಿಕೆ: ಯರಗಟ್ಟಿ ತಾಲೂಕಿಗೆ ಈಗಾಗಲೇ ಪೊಲೀಸ್ ಠಾಣೆ ಮತ್ತು ಮಿನಿ ವಿಧಾನಸೌಧ, ಅಗ್ನಿಶಾಮಕ ಠಾಣೆ ಮಂಜುರಾಗಿದೆ ಇನ್ನೂಳಿದ ಇಲಾಖೆಗಳು ಹಂತ ಹಂತವಾಗಿ ಪ್ರಾರಂಭಿಸಲು ಮತ್ತು ತಾಲೂಕಿ ನೀರಾವರಿ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಕೊಡುವಂತೆ ಕೇಳಿದ್ದೆನೆ. ವಿಶ್ವಾಸ ವೈದ್ಯ, ಶಾಸಕರು ಸವದತ್ತಿ ಯಲ್ಲಮ್ಮ ವಿಧಾನ ಸಭಾ ಕ್ಷೇತ್ರ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 