ದೇವಾಲಯ ಕಟ್ಟಡ ನಿರ್ಮಾಣಕ್ಕೆ ಎಚ್.ಡಿ.ಕುಮಾರಸ್ವಾಮಿ ದೇಣಿಗೆ
HD Kumaraswamy donation for construction of temple building
ಗದಗ 09 : ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅಂಕಲಿಯಲ್ಲಿ ಆರಾಧ್ಯ ದೇವತೆ ಮರಿಯಮ್ಮ ದೇವಿಯ ನೂತನ ದೇವಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಮರಿಯಮ್ಮ ದೇವಸ್ಥಾನ ಟ್ರಸ್ಟ್ ನಿಯೋಗ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರನ್ನು ಭೇಟಿಮಾಡಿ ದೇವಸ್ಥಾನ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ಮನವಿ ಸಲ್ಲಿಸಿತು. ನಿಯೋಗದ ಮನವಿಗೆ ತಕ್ಷಣ ಸ್ಪಂದಿಸಿದ ಎಚ್.ಡಿ.ಕುಮಾರಸ್ವಾಮಿ ತಮ್ಮ ಆಪ್ತ ಸಹಾಯಕ ಗಂಗಾಧರ್ ಹೊಂಬಾಳೆಮಠ ಮುಖಾಂತರ ದೇವಸ್ಥಾನ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿಯನ್ನು ಚೆಕ್ಕ್ ಮೂಲಕ ದೇಣಿಯಾಗಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಅಂಕಲಿ ಗ್ರಾಮದ ಹಿರಿಯರಾದ ಫಕ್ಕಿರೆಡ್ಡಿ ಗೋಡಪಟ್ಟಿ ಬಾಬುರೆಡ್ಡಿ ದೋನ್ನೂರು ಹಾಲೇಶ ಪ್ರಚಾರ ಶಂಭು ಹಿರೇಮಠ ನಿಂಗಪ್ಪ ಹಿರಿಜನ ಸುರೇಶ ಮೇಲ್ಮನಿ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 