ದೇವಾಲಯ ಕಟ್ಟಡ ನಿರ್ಮಾಣಕ್ಕೆ ಎಚ್.ಡಿ.ಕುಮಾರಸ್ವಾಮಿ ದೇಣಿಗೆ
HD Kumaraswamy donation for construction of temple building
ಗದಗ 09 : ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅಂಕಲಿಯಲ್ಲಿ ಆರಾಧ್ಯ ದೇವತೆ ಮರಿಯಮ್ಮ ದೇವಿಯ ನೂತನ ದೇವಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಮರಿಯಮ್ಮ ದೇವಸ್ಥಾನ ಟ್ರಸ್ಟ್ ನಿಯೋಗ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರನ್ನು ಭೇಟಿಮಾಡಿ ದೇವಸ್ಥಾನ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ಮನವಿ ಸಲ್ಲಿಸಿತು. ನಿಯೋಗದ ಮನವಿಗೆ ತಕ್ಷಣ ಸ್ಪಂದಿಸಿದ ಎಚ್.ಡಿ.ಕುಮಾರಸ್ವಾಮಿ ತಮ್ಮ ಆಪ್ತ ಸಹಾಯಕ ಗಂಗಾಧರ್ ಹೊಂಬಾಳೆಮಠ ಮುಖಾಂತರ ದೇವಸ್ಥಾನ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿಯನ್ನು ಚೆಕ್ಕ್ ಮೂಲಕ ದೇಣಿಯಾಗಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಅಂಕಲಿ ಗ್ರಾಮದ ಹಿರಿಯರಾದ ಫಕ್ಕಿರೆಡ್ಡಿ ಗೋಡಪಟ್ಟಿ ಬಾಬುರೆಡ್ಡಿ ದೋನ್ನೂರು ಹಾಲೇಶ ಪ್ರಚಾರ ಶಂಭು ಹಿರೇಮಠ ನಿಂಗಪ್ಪ ಹಿರಿಜನ ಸುರೇಶ ಮೇಲ್ಮನಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 