ಹಲಸಂಗಿ ಚಿನ್ನದ ಅಂಗಡಿಗೆ ಕನ್ನ: ಹಾಡು ಹಗಲೇ ದರೋಡೆ ವ್ಯಕ್ತಿ ವೂರ್ವನ ಮೇಲೆ ಗುಂಡು ಹಾರಿಸಿ ಪರಾರಿ
Halasangi gold shop robbed: Man shoots at shopkeeper in broad daylight, flees
ಚಡಚನ್ 27: ಹಲಸಂಗಿ ಗ್ರಾಮದ ಚಿನ್ನದ ಅಂಗಡಿಗೆ ನುಗ್ಗಿದ ಮುಸುಕುದಾರಿಗಳು ಗುಂಡು ಹಾರಿಸಿ ಅಂಗಡಿಯಲ್ಲಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ದೋಚಿ ಪರಾರಿಯಾದ ಘಟನೆ ಹಾಡುಹಗಲೇ ಸೋಮವಾರ ಮದ್ಯಾಹ್ನ ನಡೆದಿದೆ.ಹಲಸಂಗಿ ಗ್ರಾಮದ ಮಹಾರುದ್ರ ಕಾಂಚಾಗಾರ ಎಂಬ ವ್ಯಕ್ತಿಗೆ ಸೇರಿದ ಚಿನ್ನದ ಅಂಗಡಿಯ ಮೇಲೆ ಮುಸುಕುಧಾರಿ ವ್ಯಕ್ತಿಗಳು ಇಬ್ಬರೂ ಮದ್ಯಾಹ್ನ 3:30 ಗಂಟೆಗೆ ಬೈಕ್ ಮೇಲೆ ಆಗಮಿಸಿ ಜನರನ್ನು ಚದುರಿಸಲು ಗುಂಡು ಹಾರಿಸಿ ಅಂಗಡಿಯಲ್ಲಿದ್ದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು ದೋಚಿ ಪರಾರಿಯಾಗಿದ್ದಾರೆ.
ಒಂದು ಗುಂಡು ಆತ್ಮಲಿಂಗ ಸಂಗಪ್ಪ ಹೂಗಾರ 18 ಎಂಬ ವ್ಯಕ್ತಿ ಯ ಬಲಗಾಲಿಗೆ ಗುಂಡು ತಗುಲಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಬಿ ಎಲ್ ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.ದರೋಡೆ ಹಾಗೂ ಗುಂಡು ಹಾರಿಸಿದ ಸಿಸಿಟಿವ್ಹಿಯಲ್ಲಿ ಸಂಪೂರ್ಣ ಸೆರೆಯಾದ ವಿಡಿಯೋ ಕಲೆ ಹಾಕಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಸ್ಥಳಕ್ಕೆ ಧಾವಿಸಿದ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಸದಾಶಿವ ಕಟ್ಟಿಮನಿ, ಸಿಪಿಐ ಪರಸುರಾಮ ಮನಗೂಳಿ, ಝಳಕಿ ಪೋಲಿಸ್ ಠಾಣೆಯ ಪಿಎಸ್ಐ ಮಂಜುನಾಥ ತಿರಕನ್ನವರ, ಚಡಚಣ ಪಿಎಸ್ಐ ಸೋಮೇಶ್ ಗೆಜ್ಜಿ, ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 