ಮುಂಬೈ ನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಮುಂಬೈ, ಆಗಸ್ಟ್ 3 ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಶನಿವಾರ ಭಾರಿ ಮಳೆಯಿಂದಾಗಿ ಸಾಮಾನ್ಯ ಜೀವನ ಅಸ್ತವ್ಯಸ್ತಗೊಂಡಿದೆ.
ಮುಂದಿನ 24 ಗಂಟೆಗಳ ನಂತರವೂ ಮುಂಬೈ, ಉಪನಗರಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಹವಾಮಾನ ವಿಭಾಗದ ಉಪ ಮಹಾನಿರ್ದೇಶಕ ಕೆ.ಎಸ್.ಹೊಸಲಿಕರ್ ಅವರು, ಬಂಗಾಳಕೊಲ್ಲಿ ಪ್ರದೇಶದ ಮೇಲೆ ವಾಯುಭಾರ ಕುಸಿತದ ಕಾರಣ ಶನಿವಾರ ರಾತ್ರಿ ಮತ್ತು ಭಾನುವಾರ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಟ್ವೀಟ್ ಮಾಡಿದ್ದಾರೆ.
ವರದಿಯ ಪ್ರಕಾರ ಶನಿವಾರದಂದು ಭಾರಿ ಮಳೆಯಾಗುವ ಸೂಚನೆ ನೀಡಿದ್ದು ಅತಿ ಹೆಚ್ಚು 4.90 ಮೀಟರ್ ಎತ್ತರದ ಉಬ್ಬರವಿಳಿತ ಉಂಟಾಗಲಿದ್ದು, ಸಮುದ್ರದ ಬಳಿ ಹೋಗದಂತೆ ಜನರಿಗೆ ಮನವಿ ಮಾಡಲಾಗಿದೆ. ತುರ್ತ ಪರಿಸ್ಥಿತಿಯ ಸಮಯದಲ್ಲಿ ಜನರು 1916 ಸಂಖ್ಯೆಗೆ ಕರೆ ಮಾಡಬಹುದು ಎಂದೂ ಮುಂಬೈ ಮಹಾನಗರ ಪಾಲಿಕೆ ಟ್ವೀಟ್ ಮಾಡಿದೆ. ಮಳೆಯಿಂದ ಹಲವಡೆ ನೀರು ನಿಂತು ರಸ್ತೆ ಮತ್ತು ರೈಲುಗಳ ಸಂಚಾರಕ್ಕೂ ತೊಂದರೆಯಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 