ಮುಂಬೈ ನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಮುಂಬೈ, ಆಗಸ್ಟ್ 3 ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಶನಿವಾರ ಭಾರಿ ಮಳೆಯಿಂದಾಗಿ ಸಾಮಾನ್ಯ ಜೀವನ ಅಸ್ತವ್ಯಸ್ತಗೊಂಡಿದೆ.
ಮುಂದಿನ 24 ಗಂಟೆಗಳ ನಂತರವೂ ಮುಂಬೈ, ಉಪನಗರಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಹವಾಮಾನ ವಿಭಾಗದ ಉಪ ಮಹಾನಿರ್ದೇಶಕ ಕೆ.ಎಸ್.ಹೊಸಲಿಕರ್ ಅವರು, ಬಂಗಾಳಕೊಲ್ಲಿ ಪ್ರದೇಶದ ಮೇಲೆ ವಾಯುಭಾರ ಕುಸಿತದ ಕಾರಣ ಶನಿವಾರ ರಾತ್ರಿ ಮತ್ತು ಭಾನುವಾರ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಟ್ವೀಟ್ ಮಾಡಿದ್ದಾರೆ.
ವರದಿಯ ಪ್ರಕಾರ ಶನಿವಾರದಂದು ಭಾರಿ ಮಳೆಯಾಗುವ ಸೂಚನೆ ನೀಡಿದ್ದು ಅತಿ ಹೆಚ್ಚು 4.90 ಮೀಟರ್ ಎತ್ತರದ ಉಬ್ಬರವಿಳಿತ ಉಂಟಾಗಲಿದ್ದು, ಸಮುದ್ರದ ಬಳಿ ಹೋಗದಂತೆ ಜನರಿಗೆ ಮನವಿ ಮಾಡಲಾಗಿದೆ. ತುರ್ತ ಪರಿಸ್ಥಿತಿಯ ಸಮಯದಲ್ಲಿ ಜನರು 1916 ಸಂಖ್ಯೆಗೆ ಕರೆ ಮಾಡಬಹುದು ಎಂದೂ ಮುಂಬೈ ಮಹಾನಗರ ಪಾಲಿಕೆ ಟ್ವೀಟ್ ಮಾಡಿದೆ. ಮಳೆಯಿಂದ ಹಲವಡೆ ನೀರು ನಿಂತು ರಸ್ತೆ ಮತ್ತು ರೈಲುಗಳ ಸಂಚಾರಕ್ಕೂ ತೊಂದರೆಯಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 