ಹೊಳಗುಂದಿ : ಸಿದ್ದೇಶ್ವರ ಸ್ವಾಮಿಯ ಸಂಭ್ರಮದ ರಥೋತ್ಸವ
Holagundi: Chariot festival in celebration of Siddeshwara Swamy
ಹೂವಿನಹಡಗಲಿ 02: ತಾಲೂಕಿನ ಹೊಳಗುಂದಿ ಗ್ರಾಮದ ಆರಾದೈ ದೈವ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ಶುಕ್ರವಾರ ಸಂಜೆ 5.30ಕ್ಕೆ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆ ಯಿಂದಲೇ ವಿಶೇಷ ಪೂಜೆ , ಧಾರ್ಮಿಕ ಕಾರ್ಯ ಕ್ರಮಗಳು ಜರುಗಿದವು. ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ಮೂರು ಸುತ್ತ ಪ್ರದಕ್ಷಿಣೆ ನಂತರ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು.ಸಮಾಳ, ನಂದಿಕೋಲು,ಮಂಗಳವಾದ್ಯಗಳು ಮೆರಗು ತಂದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಉತ್ತತ್ತಿ ಎಸೆದು ಭಕ್ತಿಯಿಂದ ಕೈ ಮುಗಿದರು.ಇದಕ್ಕೂ ಮುನ್ನ ಸ್ವಾಮಿಯ ನಿಶಾನೆ ನಿವೃತ್ತ ಪ್ರಾಚಾರ್ಯ ಎಂ.ಎಂ.ಗುರುಬಸವರಾಜ ಅವರ ಪುತ್ರ ರಾಘವೇಂದ್ರ ರಾಘವೇಂದ್ರ ಅವರಿಗೆ ? 1.15101 ರೂ.ಹಾರಜು ಪಡೆದರು. ಟ್ರಸ್ಟ್ ಕಮಿಟಿ ಅದ್ಯಕ್ಷ ಎಸ್. ಮಹೇಶ್ವರ್ಪ ,ಪದಾಧಿಕಾರಿಗಳು,ಜನ ಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ಹೂವಿನಹಡಗಲಿ, ಉತ್ತಂಗಿ.ಇಟ್ಟಗಿ, ನಂದಿಹಳ್ಳಿ ಮೊರಗೇರಿ, ಹಗರಿಬೊಮ್ಮನಹಳ್ಳಿ. ಸೇರಿದಂತೆ ಅಪಾರ ಜನರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 